ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಆರ್‌ಎಸ್‌ ಸರ್ಕಾರ ಉರುಳಿಸುತ್ತೇವೆ: ಅಮಿತ್‌ ಶಾ

Last Updated 21 ಆಗಸ್ಟ್ 2022, 16:09 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದ ಟಿ.ಆರ್‌. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಇಲ್ಲಿ ಹೇಳಿದರು.

ಹೈದರಾಬಾದ್‌ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್‌ ಶಾ, ಸಿಕಂದರಾಬಾದ್‌ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮುನುಗೋಡು ಉಪಚುನಾವಣೆಯ ಗೆಲುವು ತೆಲಂಗಾಣದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಆರಂಭದ ಹೆಜ್ಜೆಯಾಗಲಿದೆ. ಟಿಆರ್‌ಎಸ್‌ ಸರ್ಕಾರ ಉರುಳಿಸುವ ಪ್ರಕ್ರಿಯೆ ಆರಂಭವಾಗಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು.

ಮುನುಗೋಡು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೊಮಟಿ ರೆಡ್ಡಿ ರಾಜಗೋಪಾಲ್ ರೆಡ್ಡಿ ರಾಜೀನಾಮೆ ನೀಡಿದ್ದು, ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಈ ಕ್ಷೇತ್ರದ ಉಪ ಚುನಾವಣೆಗೆ ರಾಜಗೋಪಾಲ್‌ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ ಮತ್ತುಟಿಆರ್‌ಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

ಅಮಿತ್‌ ಶಾ ಅವರ ಭೇಟಿಗೂ ಒಂದು ದಿನ ಮೊದಲುತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪಶ್ಚಿಮ ತೆಲಂಗಾಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT