ಗುಂಟೂರು: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಹಾಡಹಗಲೇ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವತಿಯನ್ನು ಹತ್ಯೆ ಮಾಡಿದ್ದಶಶಿಕೃಷ್ಣ ಎಂಬ ವ್ಯಕ್ತಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.2021ರ ಆಗಸ್ಟ್ 15ರಂದು ರಮ್ಯಾ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಕೊಂದು ಹಾಕಿದ್ದ.
ಈ ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಆತನನ್ನು ಜೈಲಿಗೆ ಕಳುಹಿಸಿದ್ದರು.
ಈ ಪ್ರಕರಣವನ್ನು ಅಪರೂಪದಲ್ಲೇ ಅಪರೂಪ ಎಂದು ಪರಿಗಣಿಸಿದ ಗುಂಟೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ತಪ್ಪಿತಸ್ಥ ವ್ಯಕ್ತಿಗೆ ಗಲ್ಲು ಶಿಕ್ಷೆ ನೀಡಿದೆ.