ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ಉದ್ಯಮಿಯಿಂದ ತಿರುಪತಿ ದೇವಸ್ಥಾನಕ್ಕೆ ₹1 ಕೋಟಿ ದೇಣಿಗೆ

Last Updated 20 ಸೆಪ್ಟೆಂಬರ್ 2022, 16:14 IST
ಅಕ್ಷರ ಗಾತ್ರ

ಹೈದರಾಬಾದ್‌: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್‌ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ ₹1.02 ಕೋಟಿ ದೇಣಿಗೆ ನೀಡಿದ್ದಾರೆ.

ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್‌.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು. ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು ಈ ಮೊತ್ತದ ಡಿ.ಡಿ ಹಸ್ತಾಂತರಿಸಿದರು.

‘ವೆಂಕಟೇಶ್ವರ, ಅಲ್ಲಾ, ಏಸು ಎಲ್ಲರೂ ಒಂದೇ ಎಂದು ನಂಬಿದ್ದೇನೆ. ನಾನು ವೆಂಕಟೇಶ್ವರ ಸ್ವಾಮಿಯ ಭಕ್ತ. ಸುಮಾರು 25 ವರ್ಷಗಳಿಂದ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ’ ಎಂದು ಘನಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT