ಕೋಯಿಕ್ಕೋಡ್ನಲ್ಲಿ ಇತ್ತೀಚೆಗೆ ಆರ್ಎಸ್ಎಸ್ ಆಯೋಜಿಸಿದ್ದ ‘ಸ್ನೇಹಬೋಧಿ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರನ್ನು ಸನ್ಮಾನಿಸಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದ ಅವರು, ‘ಉತ್ತರ ಭಾರತದ ಅನೇಕ ದೇವಾಲಯಗಳಿಗೆ ನಾನು ಭೇಟಿ ನೀಡಿರುವೆ. ಆದರೆ, ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ ಪ್ರವೇಶಿಸುವುದು ಸಾಧ್ಯವಾಗಿಲ್ಲ. ಈ ದೇವಾಲಯವನ್ನು ಪ್ರವೇಶಿಸುವ ಅಪೇಕ್ಷೆ ಇದೆ’ ಎಂದು ಹೇಳಿದ್ದರು. ಇದರ ಬೆನ್ನಲ್ಲೇ, ಅವರಿಗೆ ಪಕ್ಷದಿಂದ ಎಚ್ಚರಿಕೆ ನೀಡಲಾಗಿದೆ.