<p class="bodytext"><strong>ಯಮುನಾನಗರ (ಹರಿಯಾಣ): </strong>ಹಿಂದೂ ಯುವತಿಯೊಬ್ಬರನ್ನು ಮದುವೆಯಾಗುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳ ಮಧ್ಯಪ್ರವೇಶದಿಂದಾಗಿ ದಂಪತಿಯನ್ನು ಪೊಲೀಸರ ರಕ್ಷಣೆಯಲ್ಲಿರಿಸಲಾಗಿದೆ.</p>.<p class="bodytext">‘ತನ್ನ ಹೆಸರು ಬದಲಿಸಿಕೊಂಡಿರುವ 21 ವರ್ಷದ ಯುವಕ ಮದುವೆಗೂ ಮುನ್ನ ಮತಾಂತರಗೊಂಡಿದ್ದು, ನವೆಂಬರ್ 9ರಂದು ಹಿಂದೂ ಸಂಪ್ರದಾಯದಂತೆ 19 ವರ್ಷದ ಯುವತಿಯನ್ನು ವಿವಾಹವಾಗಿದ್ದಾನೆ’ ಎಂದು ಯಮುನಾನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಮಲ್ದೀಪ್ ಗೋಯೆಲ್ ಮಂಗಳವಾರ ಮಾಹಿತಿ ನೀಡಿದ್ದಾರೆ.</p>.<p class="bodytext">ಯುವತಿಯ ಕುಟುಂಬದಿಂದ ತಮ್ಮ ಜೀವಕ್ಕೆ ಮತ್ತು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತದೆ ಎನ್ನುವ ಭಯದಿಂದ ದಂಪತಿ ಹೈಕೋರ್ಟ್ ಮೊರೆ ಹೋಗಿದ್ದರು. ಯುವತಿಯ ಕುಟುಂಬದವರು ನಮ್ಮ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದು, ಸಂವಿಧಾನದ 21ನೇ ಪರಿಚ್ಛೇದದ ಅಡಿ ನೀಡಲಾಗಿರುವ ಹಕ್ಕುಗಳ ದುರುಪಯೋಗವಾಗಿದೆ ಎಂದೂ ದಂಪತಿ ದೂರು ಸಲ್ಲಿಸಿದ್ದಾರೆ.</p>.<p class="bodytext">ಹೈಕೋರ್ಟ್ನ ನಿರ್ದೇಶನದ ಮೇರೆಗೆ ಪೊಲೀಸರು ದಂಪತಿಗೆ ಮನೆಯೊಂದರಲ್ಲಿ ಇರಿಸಿ ರಕ್ಷಣೆ ನೀಡಿದ್ದಾರೆ.</p>.<p class="bodytext">‘ಯುವತಿಯ ಕುಟುಂಬವನ್ನು ಭೇಟಿ ಮಾಡಿದ್ದ ಪೊಲೀಸರು, ಯುವಕ–ಯುವತಿ ಕಾನೂನುಬದ್ಧವಾಗಿಯೇ ವಿವಾಹವಾಗಿದ್ದಾರೆ. ಅವರಿಚ್ಛೆಯಂತೆಯೇ ಅವರಿಗೆ ಒಟ್ಟಾಗಿ ಬಾಳಲು ಅವಕಾಶ ಮಾಡಿಕೊಡಬೇಕು ಎಂದು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಯುವತಿ ತನ್ನ ಕುಟುಂಬವನ್ನು ಭೇಟಿ ಮಾಡಲು ಮೊದಲು ನಿರಾಕರಿಸಿದ್ದಳು. ಆದರೆ, ನವೆಂಬರ್ 11ರಂದು ಕುಟುಂಬವನ್ನು ಒಮ್ಮೆ ಭೇಟಿ ಮಾಡುವುದಾಗಿ ಹೇಳಿದ್ದಳು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.</p>.<p class="bodytext">ವಿವಾಹದ ನೆಪದಲ್ಲಿ ಮತಾಂತರವಾಗುವುದನ್ನು (ಲವ್ ಜಿಹಾದ್) ತಪ್ಪಿಸುವ ಸಲುವಾಗಿ ಈಚೆಗಷ್ಟೇ ಹರಿಯಾಣ ರಾಜ್ಯ ಸರ್ಕಾರ ಕಾನೂನು ರೂಪಿಸಲು ಮೂರು ಸದಸ್ಯರ ಸಮಿತಿಯೊಂದನ್ನು ರಚಿಸಿದೆ ಎಂದು ಗೃಹಸಚಿವ ಅನಿಲ್ ವಿಜಾ ಕಳೆದ ವಾರವಷ್ಟೇ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಯಮುನಾನಗರ (ಹರಿಯಾಣ): </strong>ಹಿಂದೂ ಯುವತಿಯೊಬ್ಬರನ್ನು ಮದುವೆಯಾಗುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳ ಮಧ್ಯಪ್ರವೇಶದಿಂದಾಗಿ ದಂಪತಿಯನ್ನು ಪೊಲೀಸರ ರಕ್ಷಣೆಯಲ್ಲಿರಿಸಲಾಗಿದೆ.</p>.<p class="bodytext">‘ತನ್ನ ಹೆಸರು ಬದಲಿಸಿಕೊಂಡಿರುವ 21 ವರ್ಷದ ಯುವಕ ಮದುವೆಗೂ ಮುನ್ನ ಮತಾಂತರಗೊಂಡಿದ್ದು, ನವೆಂಬರ್ 9ರಂದು ಹಿಂದೂ ಸಂಪ್ರದಾಯದಂತೆ 19 ವರ್ಷದ ಯುವತಿಯನ್ನು ವಿವಾಹವಾಗಿದ್ದಾನೆ’ ಎಂದು ಯಮುನಾನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಮಲ್ದೀಪ್ ಗೋಯೆಲ್ ಮಂಗಳವಾರ ಮಾಹಿತಿ ನೀಡಿದ್ದಾರೆ.</p>.<p class="bodytext">ಯುವತಿಯ ಕುಟುಂಬದಿಂದ ತಮ್ಮ ಜೀವಕ್ಕೆ ಮತ್ತು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತದೆ ಎನ್ನುವ ಭಯದಿಂದ ದಂಪತಿ ಹೈಕೋರ್ಟ್ ಮೊರೆ ಹೋಗಿದ್ದರು. ಯುವತಿಯ ಕುಟುಂಬದವರು ನಮ್ಮ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದು, ಸಂವಿಧಾನದ 21ನೇ ಪರಿಚ್ಛೇದದ ಅಡಿ ನೀಡಲಾಗಿರುವ ಹಕ್ಕುಗಳ ದುರುಪಯೋಗವಾಗಿದೆ ಎಂದೂ ದಂಪತಿ ದೂರು ಸಲ್ಲಿಸಿದ್ದಾರೆ.</p>.<p class="bodytext">ಹೈಕೋರ್ಟ್ನ ನಿರ್ದೇಶನದ ಮೇರೆಗೆ ಪೊಲೀಸರು ದಂಪತಿಗೆ ಮನೆಯೊಂದರಲ್ಲಿ ಇರಿಸಿ ರಕ್ಷಣೆ ನೀಡಿದ್ದಾರೆ.</p>.<p class="bodytext">‘ಯುವತಿಯ ಕುಟುಂಬವನ್ನು ಭೇಟಿ ಮಾಡಿದ್ದ ಪೊಲೀಸರು, ಯುವಕ–ಯುವತಿ ಕಾನೂನುಬದ್ಧವಾಗಿಯೇ ವಿವಾಹವಾಗಿದ್ದಾರೆ. ಅವರಿಚ್ಛೆಯಂತೆಯೇ ಅವರಿಗೆ ಒಟ್ಟಾಗಿ ಬಾಳಲು ಅವಕಾಶ ಮಾಡಿಕೊಡಬೇಕು ಎಂದು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಯುವತಿ ತನ್ನ ಕುಟುಂಬವನ್ನು ಭೇಟಿ ಮಾಡಲು ಮೊದಲು ನಿರಾಕರಿಸಿದ್ದಳು. ಆದರೆ, ನವೆಂಬರ್ 11ರಂದು ಕುಟುಂಬವನ್ನು ಒಮ್ಮೆ ಭೇಟಿ ಮಾಡುವುದಾಗಿ ಹೇಳಿದ್ದಳು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.</p>.<p class="bodytext">ವಿವಾಹದ ನೆಪದಲ್ಲಿ ಮತಾಂತರವಾಗುವುದನ್ನು (ಲವ್ ಜಿಹಾದ್) ತಪ್ಪಿಸುವ ಸಲುವಾಗಿ ಈಚೆಗಷ್ಟೇ ಹರಿಯಾಣ ರಾಜ್ಯ ಸರ್ಕಾರ ಕಾನೂನು ರೂಪಿಸಲು ಮೂರು ಸದಸ್ಯರ ಸಮಿತಿಯೊಂದನ್ನು ರಚಿಸಿದೆ ಎಂದು ಗೃಹಸಚಿವ ಅನಿಲ್ ವಿಜಾ ಕಳೆದ ವಾರವಷ್ಟೇ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>