‘ಕಲ್ಕತ್ತಾವಿಶ್ವವಿದ್ಯಾಲಯದಲ್ಲಿ ಅಸ್ಸಾಮಿ ಜನರಿಗೆ ಪ್ರಾತಿನಿಧ್ಯ ಇರಲಿಲ್ಲ. ಬಿಜೆಪಿ ನಾಯಕ ಶ್ಯಾಂ ಪ್ರಸಾದ್ ಮುಖರ್ಜಿ ಅವರುಕಲ್ಕತ್ತಾ ವಿಶ್ವವಿದ್ಯಾಲಯದ ಕುಲಪತಿ ಆಗಿದ್ದಾಗ ಅಸ್ಸಾಮಿ ಭಾಷೆಗೆ ಪ್ರತ್ಯೇಕ ಭಾಷೆಯ ಸ್ಥಾನಮಾನ ನೀಡಿದ್ದರು’ ಎಂದು ಹಿಮಂತ ಹೇಳಿದ್ದರು. ಇದನ್ನು ಅಲ್ಲಗೆಳೆದಿದ್ದ ಅಖಿಲ್ ಗೊಗೊಯಿ, ‘ಮುಖ್ಯಮಂತ್ರಿ ಹೇಳುತ್ತಿರುವ ಮಾತಿನಲ್ಲಿ ಸತ್ಯ ಇಲ್ಲ. ಅಸ್ಸಾಂ ಜನರ ಅಸ್ಮಿತೆಯನ್ನು ಬಿಜೆಪಿ-ಆರ್ಎಸ್ಎಸ್ ಸಿದ್ಧಾಂತಗಳಿಗೆ ಅಡವಿಡಲಾಗುತ್ತಿದೆ’ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಈ ಮಾತು ಹೇಳಿದ್ದಾರೆ.