ಈ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ಟ್ವಿಟರ್ನಲ್ಲಿ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಅಸಾದುದ್ದೀನ್ ಒವೈಸಿ, ‘ಬಾಬರಿ ಮಸೀದಿಯನ್ನು ನಮ್ಮಿಂದ ಕಿತ್ತುಕೊಂಡಾಗ ನನಗಿನ್ನೂ 19-20 ವರ್ಷ. ಆದರೆ, ಈಗ ಅದೇ ಘಟನೆ ನಡೆಯಲು ನಾವು ಬಿಡುವುದಿಲ್ಲ. ಮತ್ತೊಂದು ಮಸೀದಿಯನ್ನು ನಾವು ಕಳೆದುಕೊಳ್ಳುವುದಿಲ್ಲ ಎಂದು ಮುಸ್ಲೀಮರು ಪ್ರತಿಜ್ಞೆ ಮಾಡಬೇಕು’ ಎಂದು ಅವರು ಆಗ್ರಹಿಸಿದರು.