ನಾಗ್ಪುರದಲ್ಲಿ ದಸರಾ ವೇಳೆ ಹೇಳಿಕೆ ನೀಡಿದ್ದ ಭಾಗವತ್, ದೇಶದಲ್ಲಿ ಸಮುದಾಯ ಆಧಾರಿತ ಜನಸಂಖ್ಯಾ ಅಸಮತೋಲನವನ್ನು ಕಡೆಗಣಿಸುವಂತಿಲ್ಲ. ಜನಸಂಖ್ಯೆಯ ಅಸಮತೋಲನವು ಭೌಗೋಳಿಕ ಗಡಿಗಳ ಬದಲಾವಣೆಗೆ ಕಾರಣವಾಗುತ್ತದೆ. ದೇಶದಲ್ಲಿ ಎಲ್ಲ ಧಾರ್ಮಿಕ ಸಮುದಾಯಗಳಿಗೆ ಅನ್ವಯವಾಗುವಂತೆ ಜನಸಂಖ್ಯಾ ನೀತಿಯನ್ನು ಜಾರಿಗೆ ತರಬೇಕು ಎಂದು ಹೇಳಿದ್ದರು.