<p class="rtejustify"><strong>ಮುಂಬೈ:</strong> ‘ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ತನ್ನ ಸಂಪೂರ್ಣ ಅವಧಿಯನ್ನು ಪೂರೈಸಲಿದೆ. ಈ ಬಗ್ಗೆ ಅನುಮಾನ ಬೇಡ’ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಗುರುವಾರ ಹೇಳಿದ್ದಾರೆ.</p>.<p class="rtejustify">ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿಯಾಗಿದ್ದರು. ಜತೆಗೆ, ಕಳೆದ ವಾರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಪವಾರ್ ಅವರನ್ನು ಭೇಟಿಯಾಗಿದ್ದರು. ಈ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪವಾರ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ.</p>.<p class="rtejustify">ಎನ್ಸಿಪಿಯ 22ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪವಾರ್ ಅವರು, ‘ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲೂ ಎಂವಿಎ ಒಗ್ಗಟ್ಟಿನ ಹೋರಾಟ ನಡೆಸಿ ಉತ್ತಮ ಸಾಧನೆ ತೋರಲಿದೆ’ ಎಂದು ಹೇಳಿದ್ದಾರೆ.</p>.<p class="rtejustify">‘ರಾಜ್ಯ ಸರ್ಕಾರ ಉಳಿವಿನ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಲಾಗುತಿದೆ. ಶಿವಸೇನಾ ವಿಶ್ವಾಸಾರ್ಹತೆ ಹೊಂದಿರುವ ಪಕ್ಷ. ಎನ್ಸಿಪಿ, ಶಿವಸೇನಾ ಮತ್ತು ಕಾಂಗ್ರೆಸ್ ಒಗ್ಗೂಡಿ ಕಾರ್ಯನಿರ್ವಹಿಸುತ್ತಿವೆ. ಉತ್ತಮ ಅನುಭವವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಮುಂಬೈ:</strong> ‘ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ತನ್ನ ಸಂಪೂರ್ಣ ಅವಧಿಯನ್ನು ಪೂರೈಸಲಿದೆ. ಈ ಬಗ್ಗೆ ಅನುಮಾನ ಬೇಡ’ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಗುರುವಾರ ಹೇಳಿದ್ದಾರೆ.</p>.<p class="rtejustify">ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿಯಾಗಿದ್ದರು. ಜತೆಗೆ, ಕಳೆದ ವಾರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಪವಾರ್ ಅವರನ್ನು ಭೇಟಿಯಾಗಿದ್ದರು. ಈ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪವಾರ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ.</p>.<p class="rtejustify">ಎನ್ಸಿಪಿಯ 22ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪವಾರ್ ಅವರು, ‘ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲೂ ಎಂವಿಎ ಒಗ್ಗಟ್ಟಿನ ಹೋರಾಟ ನಡೆಸಿ ಉತ್ತಮ ಸಾಧನೆ ತೋರಲಿದೆ’ ಎಂದು ಹೇಳಿದ್ದಾರೆ.</p>.<p class="rtejustify">‘ರಾಜ್ಯ ಸರ್ಕಾರ ಉಳಿವಿನ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಲಾಗುತಿದೆ. ಶಿವಸೇನಾ ವಿಶ್ವಾಸಾರ್ಹತೆ ಹೊಂದಿರುವ ಪಕ್ಷ. ಎನ್ಸಿಪಿ, ಶಿವಸೇನಾ ಮತ್ತು ಕಾಂಗ್ರೆಸ್ ಒಗ್ಗೂಡಿ ಕಾರ್ಯನಿರ್ವಹಿಸುತ್ತಿವೆ. ಉತ್ತಮ ಅನುಭವವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>