ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲ ಕೋಶಿಯಾರಿ ಪದಚ್ಯುತಿಗೆ ಒತ್ತಾಯ

ಮುಂಬೈನಲ್ಲಿ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನ
Last Updated 17 ಡಿಸೆಂಬರ್ 2022, 20:30 IST
ಅಕ್ಷರ ಗಾತ್ರ

ಮುಂಬೈ: ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಪದಚ್ಯುತಿ ಹಾಗೂ ಕರ್ನಾಟಕ ಜತೆಗಿನ ಗಡಿ ವಿವಾದ ಸೇರಿದಂತೆ ಅನೇಕ ವಿಷಯಗಳಲ್ಲಿ ಏಕನಾಥ್ ಶಿಂದೆ-ದೇವೇಂದ್ರ ಫಡಣ ವೀಸ್ ಸರ್ಕಾರದ ನಿಲುವು ಖಂಡಿಸಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಶನಿವಾರ ಶಕ್ತಿ ಪ್ರದರ್ಶನ ನಡೆಸಿತು.

ಭಾಯ್ಖಳಾ ಜೆಜೆ ಆಸ್ಪತ್ರೆಯಿಂದ ಆರಂಭಗೊಂಡ ಮೆರವಣಿಗೆ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ನಲ್ಲಿ ಅಂತ್ಯಗೊಂಡಿತು. ಸುಮಾರು ಮೂರು ಕಿ.ಮೀ.ವರೆಗೂ ಮೆರವಣಿಗೆ ಸಾಗಿತು.

ಕೋಶಿಯಾರಿ ಮತ್ತು ಮೂವರು ಸಚಿವರಾದ ಚಂದ್ರಕಾಂತ್ ಪಾಟೀಲ್, ಅಬ್ದುಲ್ ಸತ್ತಾರ್ ಮತ್ತು ಮಂಗಳಪ್ರಭಾತ್ ಲೋಧಾ ಅವರು ಇತ್ತೀಚೆಗೆ ಪ್ರಮುಖ ನಾಯಕರನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ನಾಯಕರು ಆರೋಪಿಸಿದರು.

‘ಶಿವಾಜಿ ಅವರು ಹಳೆ ಕಾಲದ ಐಕಾನ್‌’ ಎಂದು ಹೇಳಿಕೆ ನೀಡಿರುವ ರಾಜ್ಯಪಾಲ ಕೋಶಿಯಾರಿ ಅವರನ್ನು ಕೇಂದ್ರವು ವಾಪಸ್‌ ಕರೆಸಿಕೊಳ್ಳಬೇಕು’ ಎಂದು ಪವಾರ್ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT