ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿ ಸೈನಿಕನಾಗಿ ಹೋರಾಟ: ಮುಕುಲ್

Last Updated 8 ಮೇ 2021, 16:22 IST
ಅಕ್ಷರ ಗಾತ್ರ

ಕೋಲ್ಕತ್ತ: ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇತಿ ಶ್ರೀ ಹಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಮುಕುಲ್ ರಾಯ್, ಪಕ್ಷದ ಸೈನಿಕನಾಗಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಹೋರಾಟ ಮುಂದುವರಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಮುಕುಲ್ ರಾಯ್, ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿಯ ಓರ್ವ ಸೈನಿಕನಾಗಿ ನನ್ನ ಹೋರಾಟ ಮುಂದುವರಿಯಲಿದೆ. ಊಹಾಪೋಹಾಗಳಿಗೆ ವಿರಾಮ ಹಾಕಬೇಕೆಂದು ಎಲ್ಲರಿಗೂ ವಿನಂತಿಸುತ್ತೇನೆ. ನನ್ನ ರಾಜಕೀಯ ಹಾದಿಯಲ್ಲಿ ನಾನು ದೃಢ ನಿಶ್ಚಯದಿಂದ ಇದ್ದೇನೆ ಎಂದು ಹೇಳಿದ್ದಾರೆ.

ಹಿಂದೊಮ್ಮೆ ತೃಣಮೂಲ ಕಾಂಗ್ರೆಸ್‌ನ ಪ್ರಮುಖ ನಾಯಕತ್ವವನ್ನು ವಹಿಸಿದ್ದ ಮುಕುಲ್ ರಾಯ್, ಮಮತಾ ಬ್ಯಾನರ್ಜಿ ಆಪ್ತರಾಗಿ ಗುರುತಿಸಿಕೊಂಡಿದ್ದರು. ಬಳಿಕ 2017ರಲ್ಲಿ ಪಕ್ಷ ತೊರೆದು ಬಿಜೆಪಿಯನ್ನು ಸೇರ್ಪಡೆಗೊಂಡಿದ್ದರು.

ಇತ್ತೀಚೆಗಷ್ಟೇ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುಕುಲ್ ರಾಯ್ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

ಮುಕುಲ್ ರಾಯ್ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಶ್ಲಾಘಿಸಿದ್ದಾರೆ. ಅವರ ನಡೆ ಎಲ್ಲ ಬಿಜೆಪಿ ಕಾರ್ಯಕರ್ತರಿಗೂ ಆದರ್ಶಪ್ರಾಯವಾಗಿದ್ದು, ಎಲ್ಲರಿಗೂ ಮಾರ್ಗದರ್ಶನ ನೀಡಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT