ಇಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈ ಧ್ವನಿ ಮುದ್ರಿಕೆ ಬಹಿರಂಗೊಳಿಸಿರುವ ಸಂಚಿನ ಹಿಂದೆ ಬಿಜೆಪಿ ಕೈವಾಡವಿದೆ‘ ಎಂದು ಆರೋಪಿಸಿದರು. ‘ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಪ್ರಚಾರ ಮಾಡುತ್ತಿರುವುದನ್ನು ಸಹಿಸದ ಬಿಜೆಪಿಯವರು ಇಂಥ ಪಿತೂರಿ ಮಾಡುತ್ತಿದ್ದಾರೆ‘ ಎಂದು ಅವರು ಟೀಕಿಸಿದರು.