ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ಕಾನೂನಿನ ಮೇಲೆ ಸಂಪೂರ್ಣ ನಂಬಿಕೆ ಇದೆ. ನನ್ನ ಮಗ ನಿರಪರಾಧಿ. ಆತನಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಆತನ ಆರೋಗ್ಯ ಸರಿ ಇರಲಿಲ್ಲ. ಈಗ ಆತ ಚೇತರಿಸಿಕೊಂಡಿದ್ದು, ನಾಳೆ ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಾನೆ’ ಎಂದು ಅಜಯ್ ಮಿಶ್ರಾ ತಿಳಿಸಿದ್ದಾರೆ.