<p><strong>ನವದೆಹಲಿ:</strong> ‘ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯು ವೈಯಕ್ತಿಕ ಸ್ಪರ್ಧೆಗಿಂತ ಮಹತ್ವದ್ದಾಗಿದ್ದು, ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಮುಂದಿಡುವ ಹೆಜ್ಜೆಯಾಗಿದೆ’ ಎಂದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಭಾನುವಾರ ತಿಳಿಸಿದ್ದಾರೆ.</p>.<p>ಪುತ್ರ ಹಾಗೂ ಬಿಜೆಪಿ ಸಂಸದ ಜಯಂತ ಸಿನ್ಹಾ ಬೆಂಬಲ ಲಭಿಸದಿರುವುದಕ್ಕೆ ಯಾವುದೇ ಧರ್ಮ ಸಂಕಟವಿಲ್ಲ. ಆತ ತನ್ನ ‘ರಾಜಧರ್ಮ’ವನ್ನು ಪಾಲಿಸುತ್ತಿದ್ದಾನೆ. ನಾನು ನನ್ನ ‘ರಾಷ್ಟ್ರಧರ್ಮ’ವನ್ನು ಪಾಲಿಸುತ್ತಿದ್ದೇನೆ’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p><a href="https://www.prajavani.net/district/chamarajanagara/watch-wild-elephants-attacks-vehicle-national-highway-at-chamarajanagara-karnataka-949046.html" itemprop="url">VIDEO | ಚಾಮರಾಜನಗರ: ವಾಹನಗಳ ಮೇಲೆ ದಾಳಿಗೆ ಯತ್ನಿಸಿದ ಆನೆಗಳು </a></p>.<p>‘ಸರ್ಕಾರದ ಸರ್ವಾಧಿಕಾರಿ ನೀತಿಗಳನ್ನು ಪ್ರತಿರೋಧಿಸಬೇಕು ಎಂಬ ಸಂದೇಶವನ್ನು ಈ ಚುನಾವಣೆಯ ಮೂಲಕ ಭಾರತದ ಜನತೆಗೆ ನೀಡುತ್ತಿದ್ದೇವೆ’ ಎಂದಿದ್ದಾರೆ.</p>.<p>‘ಒಬ್ಬ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡುವುದರಿಂದ ಇಡೀ ಸಮುದಾಯದ ಉನ್ನತಿಯಾಗುವುದಿಲ್ಲ. ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿಸಿರುವುದು ಬಿಜೆಪಿಯ ರಾಜಕೀಯ ಸಂಕೇತವಷ್ಟೇ’ ಎಂದೂ ಹೇಳಿದ್ದಾರೆ.</p>.<p>ಇಡೀ ಸಮುದಾಯದ ಉನ್ನತಿಯು ಸರ್ಕಾರವು ಅನುಸರಿಸುವ ನೀತಿಗಳ ಮೇಲೆ ಅವಲಂಬಿತವಾಗಿದೆ ಎಂದೂಯಶವಂತ ಸಿನ್ಹಾ ಅವರು ಪ್ರತಿಪಾದಿಸಿದ್ದಾರೆ.</p>.<p><a href="https://www.prajavani.net/india-news/simranjit-singh-mann-of-shiromani-akali-dal-amritsar-wins-sangrur-lok-sabha-bypoll-949038.html" itemprop="url">ಸಿಎಂ ಭಗವಂತ ಮಾನ್ ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರದಲ್ಲಿ ಎಎಪಿಗೆ ಸೋಲು </a></p>.<p>‘ಇಂದು ನಮ್ಮ ದೇಶದಲ್ಲಿ ರಾಜಕೀಯವು ಹಲವು ದೌರ್ಬಲ್ಯಗಳನ್ನು ಒಳಗೊಂಡಿದೆ. ಇದು ಜನರು ಬೀದಿಗಿಳಿಯುವಂತೆ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ಹೀಗಾಗಬಾರದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯು ವೈಯಕ್ತಿಕ ಸ್ಪರ್ಧೆಗಿಂತ ಮಹತ್ವದ್ದಾಗಿದ್ದು, ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಮುಂದಿಡುವ ಹೆಜ್ಜೆಯಾಗಿದೆ’ ಎಂದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಭಾನುವಾರ ತಿಳಿಸಿದ್ದಾರೆ.</p>.<p>ಪುತ್ರ ಹಾಗೂ ಬಿಜೆಪಿ ಸಂಸದ ಜಯಂತ ಸಿನ್ಹಾ ಬೆಂಬಲ ಲಭಿಸದಿರುವುದಕ್ಕೆ ಯಾವುದೇ ಧರ್ಮ ಸಂಕಟವಿಲ್ಲ. ಆತ ತನ್ನ ‘ರಾಜಧರ್ಮ’ವನ್ನು ಪಾಲಿಸುತ್ತಿದ್ದಾನೆ. ನಾನು ನನ್ನ ‘ರಾಷ್ಟ್ರಧರ್ಮ’ವನ್ನು ಪಾಲಿಸುತ್ತಿದ್ದೇನೆ’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p><a href="https://www.prajavani.net/district/chamarajanagara/watch-wild-elephants-attacks-vehicle-national-highway-at-chamarajanagara-karnataka-949046.html" itemprop="url">VIDEO | ಚಾಮರಾಜನಗರ: ವಾಹನಗಳ ಮೇಲೆ ದಾಳಿಗೆ ಯತ್ನಿಸಿದ ಆನೆಗಳು </a></p>.<p>‘ಸರ್ಕಾರದ ಸರ್ವಾಧಿಕಾರಿ ನೀತಿಗಳನ್ನು ಪ್ರತಿರೋಧಿಸಬೇಕು ಎಂಬ ಸಂದೇಶವನ್ನು ಈ ಚುನಾವಣೆಯ ಮೂಲಕ ಭಾರತದ ಜನತೆಗೆ ನೀಡುತ್ತಿದ್ದೇವೆ’ ಎಂದಿದ್ದಾರೆ.</p>.<p>‘ಒಬ್ಬ ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡುವುದರಿಂದ ಇಡೀ ಸಮುದಾಯದ ಉನ್ನತಿಯಾಗುವುದಿಲ್ಲ. ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿಸಿರುವುದು ಬಿಜೆಪಿಯ ರಾಜಕೀಯ ಸಂಕೇತವಷ್ಟೇ’ ಎಂದೂ ಹೇಳಿದ್ದಾರೆ.</p>.<p>ಇಡೀ ಸಮುದಾಯದ ಉನ್ನತಿಯು ಸರ್ಕಾರವು ಅನುಸರಿಸುವ ನೀತಿಗಳ ಮೇಲೆ ಅವಲಂಬಿತವಾಗಿದೆ ಎಂದೂಯಶವಂತ ಸಿನ್ಹಾ ಅವರು ಪ್ರತಿಪಾದಿಸಿದ್ದಾರೆ.</p>.<p><a href="https://www.prajavani.net/india-news/simranjit-singh-mann-of-shiromani-akali-dal-amritsar-wins-sangrur-lok-sabha-bypoll-949038.html" itemprop="url">ಸಿಎಂ ಭಗವಂತ ಮಾನ್ ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರದಲ್ಲಿ ಎಎಪಿಗೆ ಸೋಲು </a></p>.<p>‘ಇಂದು ನಮ್ಮ ದೇಶದಲ್ಲಿ ರಾಜಕೀಯವು ಹಲವು ದೌರ್ಬಲ್ಯಗಳನ್ನು ಒಳಗೊಂಡಿದೆ. ಇದು ಜನರು ಬೀದಿಗಿಳಿಯುವಂತೆ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ಹೀಗಾಗಬಾರದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>