ಇತಿಹಾಸದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಐತಿಹಾಸಿಕ ಕಟ್ಟಡವನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸೂಚಕ ಕೇಂದ್ರವಾಗಿ ಬದಲಾಯಿಸುವ ಯೋಜನೆಯಿದ್ದು, ಮುಂದಿನ ವರ್ಷ ಸಾರ್ವಜನಿಕರಿಗಾಗಿ ತೆರೆದುಕೊಳ್ಳುವ ಇರಾದೆಯನ್ನು ಹೊಂದಿದ್ದೇವೆ ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯಲ್ ತಿಳಿಸಿದ್ದಾರೆ.