ಪುದುಚೇರಿಯಲ್ಲಿ ಮೊದಲ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಜೆ.ಪಿ.ನಡ್ಡಾ, ‘ಕಳೆದ 35 ವರ್ಷಗಳಿಂದ ಪುದುಚೇರಿಯಲ್ಲಿ ಕಾಂಗ್ರೆಸ್ ಆಡಳಿತದಡಿ ಶೇಕಡ 52 ರಷ್ಟು ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ. ಇಲ್ಲಿನ ಕಾಲೇಜುಗಳಲ್ಲೂ ಭ್ರಷ್ಟಚಾರ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರ ಹಲವು ಸಮಯದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೂಡ ನಡೆಸಿಲ್ಲ’ ಎಂದು ಅವರು ಹೇಳಿದರು.