<p><strong>ಕೋಲ್ಕತ್ತ</strong>: ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಪಶ್ಚಿಮ ಬಂಗಾಳದ ಜನರನ್ನು ರಾಜಕೀಯ ಹಿಂಸಾಚಾರದ ಸರಪಳಿಯಿಂದ ರಕ್ಷಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಾಂಕೇತಿಕವಾಗಿ ಪ್ರತಿಜ್ಞೆ ಮಾಡಿದರು.</p>.<p>ಕೋಲ್ಕತ್ತದ ಗಾಂಧಿ ಪ್ರತಿಮೆ ಬಳಿಮಂಗಳವಾರ ನಡೆದ ಧರಣಿಯಲ್ಲಿ ಭಾಗವಹಿಸಿದ ಅವರು,‘ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿ ವ್ಯಾಪಕವಾಗಿ ಹಿಂಸಾಚಾರ ನಡೆದಿದೆ. ಈ ಬಗ್ಗೆ ನಾವು ದೇಶಕ್ಕೆ ತಿಳಿಯುವಂತೆ ಮಾಡುತ್ತೇವೆ’ ಎಂದರು.</p>.<p>‘ದೌರ್ಜನ್ಯಕ್ಕೊಳಗಾದ ಪಕ್ಷದ ಸದಸ್ಯರಿಗೆ ನೆರವು ಒದಗಿಸಲು ನಾನು ಉತ್ತರ ಪರಗಣ ಜಿಲ್ಲೆಗೆ ಭೇಟಿ ನೀಡುತ್ತೇನೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರದ ಬಗ್ಗೆ ನಾವು ದೇಶದ ಜನತೆಗೆ ಹೇಳಲು ಬಯಸುತ್ತೇವೆ’ ಎಂದು ಅವರು ತಿಳಿಸಿದರು</p>.<p>‘ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲುವು ಸಾಧಿಸಿದ ಬಳಿಕ ನಡೆದ ಹಿಂಸಾಚಾರದಲ್ಲಿ ಒಬ್ಬ ಮಹಿಳೆ ಸೇರಿದಂತೆ ಪಕ್ಷದ ಆರು ಮಂದಿ ಕಾರ್ಯಕರ್ತರು ಮೃತಪಟ್ಟಿದ್ದಾರೆ’ ಎಂದು ಬಿಜೆಪಿ ಆರೋಪಿಸಿದೆ.</p>.<p>‘ನಾವು ಪಶ್ಚಿಮ ಬಂಗಾಳದ ಜನರ ಕನಸು ನನಸಾಗಲು ಸಹಾಯ ಮಾಡುತ್ತೇವೆ. ರಾಜಕೀಯ ಹಿಂಸಾಚಾರಕ್ಕೆ ಇತಿಶ್ರೀ ಹಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ’ ಎಂದು ಅವರು ಹೇಳಿದರು.</p>.<p>ಈ ವೇಳೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಶ್ ಕೂಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಪಶ್ಚಿಮ ಬಂಗಾಳದ ಜನರನ್ನು ರಾಜಕೀಯ ಹಿಂಸಾಚಾರದ ಸರಪಳಿಯಿಂದ ರಕ್ಷಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಾಂಕೇತಿಕವಾಗಿ ಪ್ರತಿಜ್ಞೆ ಮಾಡಿದರು.</p>.<p>ಕೋಲ್ಕತ್ತದ ಗಾಂಧಿ ಪ್ರತಿಮೆ ಬಳಿಮಂಗಳವಾರ ನಡೆದ ಧರಣಿಯಲ್ಲಿ ಭಾಗವಹಿಸಿದ ಅವರು,‘ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿ ವ್ಯಾಪಕವಾಗಿ ಹಿಂಸಾಚಾರ ನಡೆದಿದೆ. ಈ ಬಗ್ಗೆ ನಾವು ದೇಶಕ್ಕೆ ತಿಳಿಯುವಂತೆ ಮಾಡುತ್ತೇವೆ’ ಎಂದರು.</p>.<p>‘ದೌರ್ಜನ್ಯಕ್ಕೊಳಗಾದ ಪಕ್ಷದ ಸದಸ್ಯರಿಗೆ ನೆರವು ಒದಗಿಸಲು ನಾನು ಉತ್ತರ ಪರಗಣ ಜಿಲ್ಲೆಗೆ ಭೇಟಿ ನೀಡುತ್ತೇನೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರದ ಬಗ್ಗೆ ನಾವು ದೇಶದ ಜನತೆಗೆ ಹೇಳಲು ಬಯಸುತ್ತೇವೆ’ ಎಂದು ಅವರು ತಿಳಿಸಿದರು</p>.<p>‘ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲುವು ಸಾಧಿಸಿದ ಬಳಿಕ ನಡೆದ ಹಿಂಸಾಚಾರದಲ್ಲಿ ಒಬ್ಬ ಮಹಿಳೆ ಸೇರಿದಂತೆ ಪಕ್ಷದ ಆರು ಮಂದಿ ಕಾರ್ಯಕರ್ತರು ಮೃತಪಟ್ಟಿದ್ದಾರೆ’ ಎಂದು ಬಿಜೆಪಿ ಆರೋಪಿಸಿದೆ.</p>.<p>‘ನಾವು ಪಶ್ಚಿಮ ಬಂಗಾಳದ ಜನರ ಕನಸು ನನಸಾಗಲು ಸಹಾಯ ಮಾಡುತ್ತೇವೆ. ರಾಜಕೀಯ ಹಿಂಸಾಚಾರಕ್ಕೆ ಇತಿಶ್ರೀ ಹಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ’ ಎಂದು ಅವರು ಹೇಳಿದರು.</p>.<p>ಈ ವೇಳೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಶ್ ಕೂಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>