ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಭಜನೆ ನಿಲ್ಲಿಸಬೇಕು: ಗೋದ್ರೆಜ್‌ ಅಧ್ಯಕ್ಷ

Last Updated 4 ಸೆಪ್ಟೆಂಬರ್ 2022, 21:46 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ‘ದೇಶ ವಿಭಜಿಸುವುದನ್ನು ನಾವು ನಿಲ್ಲಿಸಬೇಕಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ ಎಂಬುದನ್ನು ಸರ್ಕಾರವು ಅರ್ಥಮಾಡಿಕೊಳ್ಳಬೇಕಿದೆ’ ಎಂದು ಗೋದ್ರೆಜ್‌ ಇಂಡಸ್ಟ್ರೀಸ್‌ ಅಧ್ಯಕ್ಷ ನಾದಿರ್ ಗೋದ್ರೆಜ್‌ ಹೇಳಿದ್ದಾರೆ.

ಇಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ಭಿನ್ನದನಿಗಳನ್ನು ಹತ್ತಿಕ್ಕುವ ಸರ್ಕಾರ ಇಲ್ಲದಿರುವ, ಅಭಿವ್ಯಕ್ತಿ ಸ್ವಾತಂತ್ರ್ಯ ವಿರುವ ಸ್ಥಿತಿಯನ್ನು ನಾನು ನೋಡಲು ಬಯಸುತ್ತೇನೆ’ ಎಂಬ ಕವನದ ಸಾಲುಗಳ ಮೂಲಕ ಅವರು ಮಾತು ಆರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT