ಮುಂಬೈ (ಪಿಟಿಐ): ‘ದೇಶ ವಿಭಜಿಸುವುದನ್ನು ನಾವು ನಿಲ್ಲಿಸಬೇಕಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ ಎಂಬುದನ್ನು ಸರ್ಕಾರವು ಅರ್ಥಮಾಡಿಕೊಳ್ಳಬೇಕಿದೆ’ ಎಂದು ಗೋದ್ರೆಜ್ ಇಂಡಸ್ಟ್ರೀಸ್ ಅಧ್ಯಕ್ಷ ನಾದಿರ್ ಗೋದ್ರೆಜ್ ಹೇಳಿದ್ದಾರೆ.
ಇಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ಭಿನ್ನದನಿಗಳನ್ನು ಹತ್ತಿಕ್ಕುವ ಸರ್ಕಾರ ಇಲ್ಲದಿರುವ, ಅಭಿವ್ಯಕ್ತಿ ಸ್ವಾತಂತ್ರ್ಯ ವಿರುವ ಸ್ಥಿತಿಯನ್ನು ನಾನು ನೋಡಲು ಬಯಸುತ್ತೇನೆ’ ಎಂಬ ಕವನದ ಸಾಲುಗಳ ಮೂಲಕ ಅವರು ಮಾತು ಆರಂಭಿಸಿದ್ದರು.