<p><strong>ಕೋಹಿಮಾ:</strong> ನಾಗಾಲ್ಯಾಂಡ್ನ ಮೊನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗುವುದು ಎಂದು ನಾಗಾಲ್ಯಾಂಡ್ ಸರ್ಕಾರ ಘೋಷಿಸಿದೆ.</p>.<p>ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಇಂದು (ಸೋಮವಾರ) ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.</p>.<p>ಘಟನೆ ಕುರಿತು ತನಿಖೆ ನಡೆಸಲು ಐಜಿಪಿ ನೇತೃತ್ವದ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ.</p>.<p><strong>ಓದಿ:</strong><a href="https://www.prajavani.net/india-news/civilians-killed-by-security-forces-in-indias-northeast-police-890216.html" itemprop="url">ನಾಗಾಲ್ಯಾಂಡ್: ಸೈನಿಕರ ಗುಂಡಿಗೆ 14 ಮಂದಿ ಬಲಿ </a></p>.<p>ನಾಗರಿಕರ ಸಾವಿಗೆ ಕಾರಣವಾದ ಘಟನೆಯನ್ನು ರಾಜ್ಯ ಸರ್ಕಾರವು ಖಂಡಿಸುತ್ತದೆ ಎಂದು ನಾಗಾಲ್ಯಾಂಡ್ ಮುಖ್ಯ ಕಾರ್ಯದರ್ಶಿ ಜೆ.ಅಲಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಸಚಿವ ಪಿ. ಪೈವಾಂಗ್ ನೇತೃತ್ವದಲ್ಲಿ ಡಿಜಿಪಿ ಸೇರಿದಂತೆ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ತೆರಳಿದ್ದು, ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ. ತುರ್ತು ಪರಿಹಾರ ಕಾರ್ಯಾಚರಣೆಗೆ ಸರ್ಕಾರದ ಹೆಲಿಕಾಪ್ಟರ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದಾರೆ. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಘಟನೆ ಶನಿವಾರ ಸಂಜೆಯ ಹೊತ್ತು ನಡೆದಿತ್ತು ಎಂದು ಪೊಲೀಸರು ಭಾನುವಾರ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಹಿಮಾ:</strong> ನಾಗಾಲ್ಯಾಂಡ್ನ ಮೊನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗುವುದು ಎಂದು ನಾಗಾಲ್ಯಾಂಡ್ ಸರ್ಕಾರ ಘೋಷಿಸಿದೆ.</p>.<p>ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಇಂದು (ಸೋಮವಾರ) ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.</p>.<p>ಘಟನೆ ಕುರಿತು ತನಿಖೆ ನಡೆಸಲು ಐಜಿಪಿ ನೇತೃತ್ವದ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ.</p>.<p><strong>ಓದಿ:</strong><a href="https://www.prajavani.net/india-news/civilians-killed-by-security-forces-in-indias-northeast-police-890216.html" itemprop="url">ನಾಗಾಲ್ಯಾಂಡ್: ಸೈನಿಕರ ಗುಂಡಿಗೆ 14 ಮಂದಿ ಬಲಿ </a></p>.<p>ನಾಗರಿಕರ ಸಾವಿಗೆ ಕಾರಣವಾದ ಘಟನೆಯನ್ನು ರಾಜ್ಯ ಸರ್ಕಾರವು ಖಂಡಿಸುತ್ತದೆ ಎಂದು ನಾಗಾಲ್ಯಾಂಡ್ ಮುಖ್ಯ ಕಾರ್ಯದರ್ಶಿ ಜೆ.ಅಲಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಸಚಿವ ಪಿ. ಪೈವಾಂಗ್ ನೇತೃತ್ವದಲ್ಲಿ ಡಿಜಿಪಿ ಸೇರಿದಂತೆ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ತೆರಳಿದ್ದು, ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ. ತುರ್ತು ಪರಿಹಾರ ಕಾರ್ಯಾಚರಣೆಗೆ ಸರ್ಕಾರದ ಹೆಲಿಕಾಪ್ಟರ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದಾರೆ. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಘಟನೆ ಶನಿವಾರ ಸಂಜೆಯ ಹೊತ್ತು ನಡೆದಿತ್ತು ಎಂದು ಪೊಲೀಸರು ಭಾನುವಾರ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>