ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಕಲಾಪ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಬೇಡಿ: ವೆಂಕಯ್ಯನಾಯ್ಡು ಎಚ್ಚರಿಕೆ

Last Updated 3 ಫೆಬ್ರುವರಿ 2021, 7:30 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆಯ ಕಲಾಪವನ್ನು ಮೊಬೈಲ್‌ ಫೋನ್‌ನಲ್ಲಿ ರೆಕಾರ್ಡ್‌ ಮಾಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು. ಇದು ನಿಯಮಾವಳಿಯ ಉಲ್ಲಂಘನೆಯಾಗುತ್ತದೆ ಎಂದು ರಾಜ್ಯಸಭೆಯ ಸಭಾಧ್ಯಕ್ಷ ಎಂ. ವೆಂಕಯ್ಯನಾಯ್ಡು ಅವರು ಸಂಸದರಿಗೆ ಎಚ್ಚರಿಕೆ ನೀಡಿದರು.

‘ರಾಜ್ಯಸಭೆಯಲ್ಲಿ ಮೊಬೈಲ್‌ ಫೋನ್‌ಗಳ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಕೆಲವೊಂದು ಸದಸ್ಯರು ರಾಜ್ಯಸಭೆಯ ಪ್ರಕ್ರಿಯೆಗಳನ್ನು ಮೊಬೈಲ್‌ ಫೋನ್‌ನಲ್ಲಿ ರೆಕಾರ್ಡ್‌ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ನಡವಳಿಕೆಯು ಸಂಸದೀಯ ನಿಯಮಕ್ಕೆ ವಿರುದ್ಧವಾಗಿದೆ’ ಎಂದು ವೆಂಕಯ್ಯ ನಾಯ್ಡು ಅವರು ಹೇಳಿದರು.

‘ರಾಜ್ಯಸಭೆಯಲ್ಲಿ ಕುಳಿತು ಅನಗತ್ಯ ಚಟುವಟಿಕೆಗಳನ್ನು ಮಾಡಬಾರದು. ಅಲ್ಲದೆ ಈ ರೀತಿಯ ಅನಧಿಕೃತ ವಿಡಿಯೊಗಳನ್ನು ಸುದ್ದಿ ವಾಹಿನಿಗಳು ಕೂಡ ಬಳಸಬಾರದು’ ಎಂದು ಅವರು ಎಚ್ಚರಿಕೆ ನೀಡಿದರು.

ವಿರೋಧ ಪಕ್ಷಗಳ ಕೆಲವು ಸದಸ್ಯರು ಮಂಗಳವಾರ ಕೃಷಿ ಕಾಯ್ದೆಗಳ ಚರ್ಚೆಯ ವಿಡಿಯೊವನ್ನು ಮೊಬೈಲ್‌ ಪೋನ್‌ನಲ್ಲಿ ರೆಕಾರ್ಡ್‌ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊದ ತುಣುಕನ್ನು ಹಲವು ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT