ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ತನಿಖೆ ಮೇಲೆ ಇಸ್ರೊ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಪ್ರಭಾವ: ಆರೋಪ

Last Updated 10 ನವೆಂಬರ್ 2021, 9:34 IST
ಅಕ್ಷರ ಗಾತ್ರ

ಕೊಚ್ಚಿ:ಇಸ್ರೊ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಅವರುಬೇಹುಗಾರಿಕೆ ಪ್ರಕರಣದಲ್ಲಿಸಿಬಿಐ ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂದುಮಾಜಿ ಪೊಲೀಸ್ ಅಧಿಕಾರಿ ಎಸ್. ವಿಜಯನ್ ಆರೋಪಿಸಿದ್ದಾರೆ.

1994ರ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಜಯನ್‌ ಸೇರಿದಂತೆ ಕೇರಳದ ಪೊಲೀಸ್‌ ಮತ್ತು ಗುಪ್ತಚರ ವಿಭಾಗದ17 ಮಂದಿ ಮಾಜಿ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದು, ನಂಬಿ ನಾರಾಯಣನ್‌ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ವ್ಯವಹಾರ ನಡೆಸಿದ್ದಾರೆ ಎಂದು ವಿಜಯನ್ ಪರ ವಕೀಲರು ಬುಧವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ನಾರಾಯಣನ್‌ ಅಥವಾ ಅವರ ಮಗ ತಿರುನಲ್ವೇಲಿ ಜಿಲ್ಲೆಯಲ್ಲಿ ಹಲವು ಎಕರೆಗಳ ಜಮೀನಿನ ಪವರ್ ಆಫ್ ಅಟಾರ್ನಿ ಹೊಂದಿದ್ದಾರೆಂದು ಸಾಬೀತುಪಡಿಸುವ ಸ್ವಾಧೀನ ಪ್ರಮಾಣ ಪತ್ರಗಳನ್ನು ವಿಚಾರಣಾ ನ್ಯಾಯಾಲಯದ ಎದುರು ಸಲ್ಲಿಸಿರುವುದಾಗಿ ವಿಜಯನ್ ಪರ ವಕೀಲರು ಬುಧವಾರ ನ್ಯಾಯಮೂರ್ತಿ ಆರ್. ನಾರಾಯಣ ಪಿಶಾರದಿ ಅವರ ಗಮನಕ್ಕೆ ತಂದರು.

’ಈ ಜಮೀನನ್ನು ಸಿಬಿಐ ಅಧಿಕಾರಿಗಳಿಗೆ ಮಾರಾಟ ಮಾಡಲಾಗಿದೆ ಎಂದು ಹೈಕೋರ್ಟ್‌ನಲ್ಲಿ ಆರೋಪಿಸಿರುವ ವಿಜಯನ್‌, ಮಾಜಿ ವಿಜ್ಞಾನಿ ಮತ್ತು ಸಿಬಿಐ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಕಾಯ್ದೆಯಡಿ ತನಿಖೆಗೆ ಆದೇಶಿಸಲು ಇಷ್ಟು ದಾಖಲೆಗಳು ಸಾಕಾಗುತ್ತವೆ’ ಎಂದು ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ’ಸ್ವಾಧೀನ ಪ್ರಮಾಣ ಪತ್ರ ಭೂಮಿ ಮಾರಾಟವಾಗಿರುವುದಕ್ಕೆ ಆಧಾರವಾಗುವುದಿಲ್ಲ. ಭೂಮಿ ಮಾರಾಟವಾಗಿರುವ ಕುರಿತ ಕ್ರಯಪತ್ರದ ದಾಖಲೆಗಳನ್ನು ಸಲ್ಲಿಸಿ’ ಎಂದು ವಿಜಯನ್‌ ಅವರಿಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT