ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮ ಶ್ರೀಗೆ ಆಯ್ಕೆಯಾದವರನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಎಲ್ಲ ನಾಗರಿಕರು ನಾಮನಿರ್ದೇಶನ ಮಾಡಬೇಕು. ನಾಗರಿಕರು ಸ್ವತಃ ತಮ್ಮ ಹೆಸರನ್ನು ಸಹ ನಾಮನಿರ್ದೇಶನ ಮಾಡಬಹುದು ಅಥವಾ ಯಾವುದೇ ವ್ಯಕ್ತಿಯ ಹೆಸರನ್ನು ಶಿಫಾರಸು ಮಾಡಬಹುದು ಎಂದು ಗೃಹ ಸಚಿವಾಲಯ ತಿಳಿಸಿದೆ.