<p><strong>ಗೋಪೇಶ್ವರ್</strong>: ಉತ್ತರಾಖಂಡದ ನಂದಪ್ರಯಾಗ್ ನಗರಸಭೆಯು ದೇಶದ ಅತ್ಯಂತ ಸ್ವಚ್ಛ ನಗರಸಭೆ ಎಂಬ ಹಿರಿಮೆಗೆ ಭಾಜನವಾಗಿದೆ.</p>.<p>ರಾಷ್ಟ್ರೀಯ ಸ್ವಚ್ಛತಾ ಮಿಷನ್ ಅಡಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಜನರ ಪ್ರತಿಕ್ರಿಯೆಯನ್ನು ಆಧರಿಸಿನಂದಪ್ರಯಾಗ್ ಅನ್ನು ಸ್ವಚ್ಛ ನಗರಸಭೆ ಎಂದು ಆಯ್ಕೆ ಮಾಡಲಾಗಿದೆ.</p>.<p>ಅಲಕಾನಂದ ಮತ್ತು ಮಂದಾಕಿನಿ ನದಿಗಳ ಸಂಗಮ ಸ್ಥಳದಲ್ಲಿ ಈ ನಗರವು ಇದೆ.</p>.<p>ಆಗಸ್ಟ್ 20ರಂದು ನಡೆಯುವ ಆನ್ಲೈನ್ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದುನಂದಪ್ರಯಾಗ್ ನಗರ ಸಭೆ ಅಧ್ಯಕ್ಷೆ ಹಿಮಾನಿ ವೈಷ್ಣವ ಮಂಗಳವಾರ ತಿಳಿಸಿದ್ದಾರೆ.</p>.<p>‘ದೇಶದ 4,000ಕ್ಕೂ ಅಧಿಕ ನಗರಸಭೆಗಳನ್ನು ಹಿಂದಿಕ್ಕಿ ಈ ಪ್ರಶಸ್ತಿ ಪಡೆದಿರುವುದು ಖುಷಿ ನೀಡಿದೆ. ಇದರಿಂದ ಹೆಮ್ಮೆಯೂ ಆಗಿದೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>‘ತ್ಯಾಜ್ಯ ವಿಲೇವಾರಿಯನ್ನು ನಾವು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇವೆ. ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸುತ್ತಿದ್ದೇವೆ. ಹಸಿ ಕಸದಿಂದ ಸಾವಯವ ಗೊಬ್ಬರ ತಯಾರಿಸುತ್ತಿದ್ದೇವೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಪೇಶ್ವರ್</strong>: ಉತ್ತರಾಖಂಡದ ನಂದಪ್ರಯಾಗ್ ನಗರಸಭೆಯು ದೇಶದ ಅತ್ಯಂತ ಸ್ವಚ್ಛ ನಗರಸಭೆ ಎಂಬ ಹಿರಿಮೆಗೆ ಭಾಜನವಾಗಿದೆ.</p>.<p>ರಾಷ್ಟ್ರೀಯ ಸ್ವಚ್ಛತಾ ಮಿಷನ್ ಅಡಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಜನರ ಪ್ರತಿಕ್ರಿಯೆಯನ್ನು ಆಧರಿಸಿನಂದಪ್ರಯಾಗ್ ಅನ್ನು ಸ್ವಚ್ಛ ನಗರಸಭೆ ಎಂದು ಆಯ್ಕೆ ಮಾಡಲಾಗಿದೆ.</p>.<p>ಅಲಕಾನಂದ ಮತ್ತು ಮಂದಾಕಿನಿ ನದಿಗಳ ಸಂಗಮ ಸ್ಥಳದಲ್ಲಿ ಈ ನಗರವು ಇದೆ.</p>.<p>ಆಗಸ್ಟ್ 20ರಂದು ನಡೆಯುವ ಆನ್ಲೈನ್ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದುನಂದಪ್ರಯಾಗ್ ನಗರ ಸಭೆ ಅಧ್ಯಕ್ಷೆ ಹಿಮಾನಿ ವೈಷ್ಣವ ಮಂಗಳವಾರ ತಿಳಿಸಿದ್ದಾರೆ.</p>.<p>‘ದೇಶದ 4,000ಕ್ಕೂ ಅಧಿಕ ನಗರಸಭೆಗಳನ್ನು ಹಿಂದಿಕ್ಕಿ ಈ ಪ್ರಶಸ್ತಿ ಪಡೆದಿರುವುದು ಖುಷಿ ನೀಡಿದೆ. ಇದರಿಂದ ಹೆಮ್ಮೆಯೂ ಆಗಿದೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>‘ತ್ಯಾಜ್ಯ ವಿಲೇವಾರಿಯನ್ನು ನಾವು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇವೆ. ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸುತ್ತಿದ್ದೇವೆ. ಹಸಿ ಕಸದಿಂದ ಸಾವಯವ ಗೊಬ್ಬರ ತಯಾರಿಸುತ್ತಿದ್ದೇವೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>