ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಲ್ ಹಾಗೂ ನ್ಯಾಯಮೂರ್ತಿ ಅರಿಜಿತ್ ಬ್ಯಾನರ್ಜಿ ಈ ನ್ಯಾಯಪೀಠದಲ್ಲಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ, ಜೈಲಿನಲ್ಲಿರಿಸಿರುವ ನಾಯಕರ ಬೆಂಬಲಿಗರಿಂದ ಒತ್ತಡ ಇದೆ. ಹೀಗಾಗಿ ತನ್ನ ಅರ್ಜಿಯ ವಿಚಾರಣೆಯನ್ನು ಸಿಬಿಐನ ವಿಶೇಷ ನ್ಯಾಯಾಲಯದಿಂದ ಹೈಕೋರ್ಟ್ಗೆ ವರ್ಗಾಯಿಸಬೇಕು’ ಎಂದು ಸಿಬಿಐ ಅರ್ಜಿ ಸಲ್ಲಿಸಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾನೂನು ಸಚಿವ ಮಲಯ್ ಘಟಕ್ ಅವರನ್ನು ಕೂಡ ಸಿಬಿಐ ಪ್ರತಿವಾದಿಗಳನ್ನಾಗಿಸಿದೆ.