ಮಂಗಳವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತಾನಾಡಿದ ರಾಣೆ, 'ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಉದ್ಧವ್ ಠಾಕ್ರೆ ಹೇಳಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಾಚಿಕೆಯಿಲ್ಲದವರು ಎಂದು ಕರೆದಿದ್ದರು. ಶಾ ವಿರುದ್ಧ ಉದ್ದೇಶಪೂರ್ವಕವಾಗಿ ಅಸಂಸದೀಯ ಪದಗಳನ್ನು ಬಳಕೆ ಮಾಡುತ್ತಿರುವುದಾಗಿ ಹೇಳಿದ್ದರು. ಇದು ಎಂತಹ ಸುಸಂಸ್ಕೃತ ಭಾಷೆ' ಎಂದು ರಾಣೆ ಪ್ರಶ್ನಿಸಿದರು.