‘ಹಿರಾನಗರ ಸೆಕ್ಟರ್ನ ಪನ್ಸಾರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡಿದರೂ, ಅದನ್ನು ಕಡೆಗಣಿಸಿ ಕಳ್ಳಸಾಗಣೆದಾರನೊಬ್ಬ ಭಾರತದ ಭೂಪ್ರದೇಶ ಪ್ರವೇಶಿಸಿದ್ದನು. ಬಳಿಕ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಭದ್ರತಾ ಸಿಬ್ಬಂದಿಯು ಆತನ ಮೇಲೆ ಗುಂಡು ಹಾರಿಸಿದರು’ ಎಂದು ಬಿಎಸ್ಎಫ್ ವಕ್ತಾರರು ಮಾಹಿತಿ ನೀಡಿದರು.