<p><strong>ನವದೆಹಲಿ</strong>:ಕ್ರಿಯಾಶೀಲ ಆಡಳಿತಕ್ಕಾಗಿ, ಪ್ರಧಾನಿ ನರೇಂದ್ರ ಮೋದಿ ಅವರು, ಮಂತ್ರಿ ಪರಿಷತ್ ಅನ್ನು ಎಂಟು ಗುಂಪುಗಳಾಗಿವಿಂಗಡಿಸಿದ್ದಾರೆ.</p>.<p>ಯುವ ಸಿಬ್ಬಂದಿಗೆ ಉತ್ತೇಜನ ನೀಡುವುದರ ಜೊತೆಗೆ, ನಿವೃತ್ತಿಯಾಗುತ್ತಿರುವ ಅಧಿಕಾರಿಗಳಿಂದ ಸಲಹೆ ಪಡೆಯುವುದು ಹಾಗೂ ತಂತ್ರಜ್ಞಾನದ ಸಮರ್ಥ ಬಳಕೆ ಮಾಡಿಕೊಳ್ಳುವ ಮೂಲಕ ಆಡಳಿತ ಸುಧಾರಣೆಗೆ ಒತ್ತು ನೀಡಲು ಯೋಜಿಸಲಾಗಿದೆ. ಯುವ ವೃತ್ತಿಪರರ ನೇಮಕದ ಯೋಜನೆಯೂ ಇದೆ ಎಂದು ಮೂಲಗಳು ತಿಳಿಸಿವೆ.</p>.<p>77 ಸಚಿವರನ್ನು 8 ಗುಂಪುಗಳಾಗಿ ವಿಂಗಡಿಸಲಾಗಿದೆ. ಹಿರಿಯ ಸಚಿವರೊಬ್ಬರು ಆ ಗುಂಪಿನ ಸಂಯೋಜಕರಾಗಿರುತ್ತಾರೆ. ಎಲ್ಲ ಸಚಿವಾಲಯಗಳ ಕಚೇರಿಗಳಲ್ಲಿ ಹೆಚ್ಚಿನ ಪಾರದರ್ಶಕತೆ, ಸುಧಾರಣೆ ಹಾಗೂ ದಕ್ಷತೆ ತರುವುದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಈ ಗುಂಪುಗಳ ಹೊಣೆ. ಅದಕ್ಕಾಗಿ ತಂತ್ರಜ್ಞಾನ ಆಧಾರಿತ ಸಂಪನ್ಮೂಲ, ತಮ್ಮ ತಂಡಕ್ಕೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ವೃತ್ತಿಪರರ ತಂಡ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಅಳವಡಿಸಿಕೊಳ್ಳಲು ಯೋಜಿಸಲಾಗಿದೆ ಎಂದು ಹೇಳಲಾಗಿದೆ.</p>.<p>ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಪರಿಷತ್ನ ಚಿಂತನಾ ಶಿಬಿರಗಳ ಸರಣಿ ಸಭೆಗಳ ನಂತರದಲ್ಲಿ, ಈ ರೀತಿಯ ಗುಂಪುಗಳನ್ನು ಮಾಡಲಾಗಿದೆ.</p>.<p>ವೈಯಕ್ತಿಕ ದಕ್ಷತೆ, ಯೋಜನೆಗಳ ಅನುಷ್ಠಾನದ ಮೇಲೆ ನಿಗಾ, ಸಚಿವಾಲಯದ ಕಾರ್ಯನಿರ್ವಹಣೆ– ಅಧಿಕಾರಿಗಳ ಪಾಲ್ಗೊಳ್ಳುವಿಕೆ, ಪಕ್ಷದ ಸಹಕಾರ ಮತ್ತು ಪರಿಣಾಮಕಾರಿ ಸಂವಹನ ಹಾಗೂ ಸಂಸದೀಯ ನಡಾವಳಿಗೆ ಸಂಬಂಧಿಸಿದಂತೆ ಒಟ್ಟು ಐದು ಸಭೆಗಳು ನಡೆದಿವೆ.</p>.<p>ಕೊನೆಯ ಚಿಂತನಾ ಶಿಬಿರದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಕೂಡ ಭಾಗವಹಿಸಿದ್ದರು.</p>.<p>ಪ್ರಮುಖವಾಗಿ ಮೋದಿ ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ದಕ್ಷತೆ ಹೆಚ್ಚಿಸುವ ಬಗ್ಗೆ,ಈ ಚಿಂತನಾ ಶಿಬಿರಗಳಲ್ಲಿನ ಚರ್ಚೆಗೆ ಆದ್ಯತೆ ನೀಡಲಾಗಿತ್ತು.</p>.<p>ಪ್ರತಿಯೊಂದು ಸಚಿವಾಲಯದ ಕಚೇರಿಯ ಪೋರ್ಟಲ್ ಅಭಿವೃದ್ಧಿಪಡಿಸಿ, ಆ ಮೂಲಕ ಕೇಂದ್ರ ಸರ್ಕಾರದ ಘೋಷಣೆಗಳು, ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಪ್ರಗತಿ, ಹಾಗೂ ತಮ್ಮ ಗುಂಪಿಗೆ ನೀಡಲಾದ ಗುರಿ ಸಾಧಿಸುವುದಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ನೀಡುತ್ತ ಹೋಗುವುದು ಈ ಗುಂಪುಗಳ ಕೆಲಸ.</p>.<p>ಸಂಶೋಧನೆ–ಸಂವಹನ ಹಾಗೂ ಇತರ ಕ್ಷೇತ್ರದಲ್ಲಿ ನುರಿತಂತಹ, ಕನಿಷ್ಠ ಮೂವರು ಯುವ ವೃತ್ತಿಪರರು ಇರುವಂತಹ ತಂಡವೊಂದನ್ನು ರೂಪಿಸುವ ಹೊಣೆಯನ್ನು ಒಂದು ಗುಂಪಿಗೆ ನೀಡಲಾಗಿದೆ. ನಿವೃತ್ತರಾಗುತ್ತಿರುವ ಉದ್ಯೋಗಿಗಳ ಅನುಭವ, ಪ್ರತಿಕ್ರಿಯೆಗಳನ್ನು ನಿರ್ವಹಿಸುವ ಪೋರ್ಟಲ್ ಸಿದ್ಧಪಡಿಸುವಂತೆ ಮತ್ತೊಂದು ಗುಂಪಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ನರೇಂದ್ರ ಸಿಂಗ್ ತೋಮರ್, ಪೀಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಅವರೂ ಇಂತಹ ತಂಡಗಳ ಸಂಯೋಜಕರಾಗಿದ್ದಾರೆ.</p>.<p>ಈ ಹೊಣೆಯು ಅವರಿಗೆ, ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಹಾಗೂ ತಮ್ಮ ತಮ್ಮ ಸಚಿವಾಲಯಗಳ ಕಚೇರಿಗಳಲ್ಲಿ ಉತ್ತಮ ಕಾರ್ಯಶೈಲಿಯನ್ನು ರೂಢಿಸಿಕೊಳ್ಳಲು ನೆರವಾಗಲಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಕ್ರಿಯಾಶೀಲ ಆಡಳಿತಕ್ಕಾಗಿ, ಪ್ರಧಾನಿ ನರೇಂದ್ರ ಮೋದಿ ಅವರು, ಮಂತ್ರಿ ಪರಿಷತ್ ಅನ್ನು ಎಂಟು ಗುಂಪುಗಳಾಗಿವಿಂಗಡಿಸಿದ್ದಾರೆ.</p>.<p>ಯುವ ಸಿಬ್ಬಂದಿಗೆ ಉತ್ತೇಜನ ನೀಡುವುದರ ಜೊತೆಗೆ, ನಿವೃತ್ತಿಯಾಗುತ್ತಿರುವ ಅಧಿಕಾರಿಗಳಿಂದ ಸಲಹೆ ಪಡೆಯುವುದು ಹಾಗೂ ತಂತ್ರಜ್ಞಾನದ ಸಮರ್ಥ ಬಳಕೆ ಮಾಡಿಕೊಳ್ಳುವ ಮೂಲಕ ಆಡಳಿತ ಸುಧಾರಣೆಗೆ ಒತ್ತು ನೀಡಲು ಯೋಜಿಸಲಾಗಿದೆ. ಯುವ ವೃತ್ತಿಪರರ ನೇಮಕದ ಯೋಜನೆಯೂ ಇದೆ ಎಂದು ಮೂಲಗಳು ತಿಳಿಸಿವೆ.</p>.<p>77 ಸಚಿವರನ್ನು 8 ಗುಂಪುಗಳಾಗಿ ವಿಂಗಡಿಸಲಾಗಿದೆ. ಹಿರಿಯ ಸಚಿವರೊಬ್ಬರು ಆ ಗುಂಪಿನ ಸಂಯೋಜಕರಾಗಿರುತ್ತಾರೆ. ಎಲ್ಲ ಸಚಿವಾಲಯಗಳ ಕಚೇರಿಗಳಲ್ಲಿ ಹೆಚ್ಚಿನ ಪಾರದರ್ಶಕತೆ, ಸುಧಾರಣೆ ಹಾಗೂ ದಕ್ಷತೆ ತರುವುದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಈ ಗುಂಪುಗಳ ಹೊಣೆ. ಅದಕ್ಕಾಗಿ ತಂತ್ರಜ್ಞಾನ ಆಧಾರಿತ ಸಂಪನ್ಮೂಲ, ತಮ್ಮ ತಂಡಕ್ಕೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ವೃತ್ತಿಪರರ ತಂಡ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಅಳವಡಿಸಿಕೊಳ್ಳಲು ಯೋಜಿಸಲಾಗಿದೆ ಎಂದು ಹೇಳಲಾಗಿದೆ.</p>.<p>ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಪರಿಷತ್ನ ಚಿಂತನಾ ಶಿಬಿರಗಳ ಸರಣಿ ಸಭೆಗಳ ನಂತರದಲ್ಲಿ, ಈ ರೀತಿಯ ಗುಂಪುಗಳನ್ನು ಮಾಡಲಾಗಿದೆ.</p>.<p>ವೈಯಕ್ತಿಕ ದಕ್ಷತೆ, ಯೋಜನೆಗಳ ಅನುಷ್ಠಾನದ ಮೇಲೆ ನಿಗಾ, ಸಚಿವಾಲಯದ ಕಾರ್ಯನಿರ್ವಹಣೆ– ಅಧಿಕಾರಿಗಳ ಪಾಲ್ಗೊಳ್ಳುವಿಕೆ, ಪಕ್ಷದ ಸಹಕಾರ ಮತ್ತು ಪರಿಣಾಮಕಾರಿ ಸಂವಹನ ಹಾಗೂ ಸಂಸದೀಯ ನಡಾವಳಿಗೆ ಸಂಬಂಧಿಸಿದಂತೆ ಒಟ್ಟು ಐದು ಸಭೆಗಳು ನಡೆದಿವೆ.</p>.<p>ಕೊನೆಯ ಚಿಂತನಾ ಶಿಬಿರದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಕೂಡ ಭಾಗವಹಿಸಿದ್ದರು.</p>.<p>ಪ್ರಮುಖವಾಗಿ ಮೋದಿ ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ದಕ್ಷತೆ ಹೆಚ್ಚಿಸುವ ಬಗ್ಗೆ,ಈ ಚಿಂತನಾ ಶಿಬಿರಗಳಲ್ಲಿನ ಚರ್ಚೆಗೆ ಆದ್ಯತೆ ನೀಡಲಾಗಿತ್ತು.</p>.<p>ಪ್ರತಿಯೊಂದು ಸಚಿವಾಲಯದ ಕಚೇರಿಯ ಪೋರ್ಟಲ್ ಅಭಿವೃದ್ಧಿಪಡಿಸಿ, ಆ ಮೂಲಕ ಕೇಂದ್ರ ಸರ್ಕಾರದ ಘೋಷಣೆಗಳು, ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಪ್ರಗತಿ, ಹಾಗೂ ತಮ್ಮ ಗುಂಪಿಗೆ ನೀಡಲಾದ ಗುರಿ ಸಾಧಿಸುವುದಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ನೀಡುತ್ತ ಹೋಗುವುದು ಈ ಗುಂಪುಗಳ ಕೆಲಸ.</p>.<p>ಸಂಶೋಧನೆ–ಸಂವಹನ ಹಾಗೂ ಇತರ ಕ್ಷೇತ್ರದಲ್ಲಿ ನುರಿತಂತಹ, ಕನಿಷ್ಠ ಮೂವರು ಯುವ ವೃತ್ತಿಪರರು ಇರುವಂತಹ ತಂಡವೊಂದನ್ನು ರೂಪಿಸುವ ಹೊಣೆಯನ್ನು ಒಂದು ಗುಂಪಿಗೆ ನೀಡಲಾಗಿದೆ. ನಿವೃತ್ತರಾಗುತ್ತಿರುವ ಉದ್ಯೋಗಿಗಳ ಅನುಭವ, ಪ್ರತಿಕ್ರಿಯೆಗಳನ್ನು ನಿರ್ವಹಿಸುವ ಪೋರ್ಟಲ್ ಸಿದ್ಧಪಡಿಸುವಂತೆ ಮತ್ತೊಂದು ಗುಂಪಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೇಂದ್ರ ಸಚಿವರಾದ ಹರದೀಪ್ ಸಿಂಗ್ ಪುರಿ, ನರೇಂದ್ರ ಸಿಂಗ್ ತೋಮರ್, ಪೀಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಅವರೂ ಇಂತಹ ತಂಡಗಳ ಸಂಯೋಜಕರಾಗಿದ್ದಾರೆ.</p>.<p>ಈ ಹೊಣೆಯು ಅವರಿಗೆ, ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಹಾಗೂ ತಮ್ಮ ತಮ್ಮ ಸಚಿವಾಲಯಗಳ ಕಚೇರಿಗಳಲ್ಲಿ ಉತ್ತಮ ಕಾರ್ಯಶೈಲಿಯನ್ನು ರೂಢಿಸಿಕೊಳ್ಳಲು ನೆರವಾಗಲಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>