<p class="title"><strong>ನವದೆಹಲಿ</strong>: ಹಬ್ಬದ ಋತು ಹತ್ತಿರವಾಗುತ್ತಿದೆ. ಜನರು ಆದಷ್ಟು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ‘ಲಸಿಕೆ ಸುರಕ್ಷತೆ ವೃತ್ತ’ದಿಂದ ಯಾರೂ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p class="title">ಮನ್ ಕೀ ಬಾತ್ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದುಷ್ಟಶಕ್ತಿಯ ವಿರುದ್ಧ 'ಮರ್ಯಾದಾ ಪುರುಷೋತ್ತಮ’ ರಾಮನ ಗೆಲುವನ್ನು ದೇಶ ಆಚರಿಸಲಿದೆ. ನಾವು ಕೋವಿಡ್ ವಿರುದ್ಧವೂ ಗೆಲ್ಲಬೇಕು ಎಂಬುದನ್ನು ಮರೆಯಬಾರದು ಎಂದರು.</p>.<p class="title">ಭಾರತವು ಈ ನಿಟ್ಟಿನಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುತ್ತಿದೆ. ಲಸಿಕೆ ಅಭಿಯಾನದಲ್ಲಿನ ದಾಖಲೆಗಳು ಜಾಗತಿಕವಾಗಿ ಚರ್ಚೆಗೆ ಒಳಗಾಗುತ್ತಿವೆ. ನಮ್ಮ ಸರದಿ ಬಂದಾಗ ಲಸಿಕೆ ಪಡೆಯಬೇಕು. ಸುರಕ್ಷತೆಯ ವೃತ್ತದಿಂದ ಯಾರೂ ಹೊರಗುಳಿದಿಲ್ಲ ಎಂದೂ ಖಾತರಿಪಡಿಸಿಕೊಳ್ಳಬೇಕು. ಲಸಿಕೆ ಪಡೆದ ನಂತರವೂ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.</p>.<p>ವಿಶ್ವ ನದಿ ದಿನ ಸಂದರ್ಭವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ನದಿಗಳನ್ನು ಮಾಲಿನ್ಯದಿಂದ ಮುಕ್ತವಾಗಿ ಇರುವಂತೆ ನೋಡಿಕೊಳ್ಳಲು ಸಂಘಟಿತವಾದ ಪ್ರಯತ್ನಗಳು ನಡೆಯಬೇಕು ಎಂದು ಕರೆ ನೀಡಿದರು.</p>.<p>ಅಲ್ಲದೆ, ಮಹಾತ್ಮಗಾಂಧಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಖಾದಿ ಉತ್ಪನ್ನಗಳ ದಾಖಲೆ ವಹಿವಾಟು ನಡೆಯುವಂತೆಯೂ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.</p>.<p>ಇದನ್ನೂ ಓದಿ...<a href="https://www.prajavani.net/india-news/pm-narendra-modi-address-81st-edition-of-mann-ki-baat-on-world-rivers-day-speaks-river-cleaning-and-870083.html" target="_blank">ಆರೋಗ್ಯದತ್ತ ಗಮನಹರಿಸಲು ಪಾಠ ಕಲಿಸಿದ ಕೋವಿಡ್: ‘ಮನ್ ಕೀ ಬಾತ್’ನಲ್ಲಿ ಮೋದಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಹಬ್ಬದ ಋತು ಹತ್ತಿರವಾಗುತ್ತಿದೆ. ಜನರು ಆದಷ್ಟು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ‘ಲಸಿಕೆ ಸುರಕ್ಷತೆ ವೃತ್ತ’ದಿಂದ ಯಾರೂ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p class="title">ಮನ್ ಕೀ ಬಾತ್ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದುಷ್ಟಶಕ್ತಿಯ ವಿರುದ್ಧ 'ಮರ್ಯಾದಾ ಪುರುಷೋತ್ತಮ’ ರಾಮನ ಗೆಲುವನ್ನು ದೇಶ ಆಚರಿಸಲಿದೆ. ನಾವು ಕೋವಿಡ್ ವಿರುದ್ಧವೂ ಗೆಲ್ಲಬೇಕು ಎಂಬುದನ್ನು ಮರೆಯಬಾರದು ಎಂದರು.</p>.<p class="title">ಭಾರತವು ಈ ನಿಟ್ಟಿನಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುತ್ತಿದೆ. ಲಸಿಕೆ ಅಭಿಯಾನದಲ್ಲಿನ ದಾಖಲೆಗಳು ಜಾಗತಿಕವಾಗಿ ಚರ್ಚೆಗೆ ಒಳಗಾಗುತ್ತಿವೆ. ನಮ್ಮ ಸರದಿ ಬಂದಾಗ ಲಸಿಕೆ ಪಡೆಯಬೇಕು. ಸುರಕ್ಷತೆಯ ವೃತ್ತದಿಂದ ಯಾರೂ ಹೊರಗುಳಿದಿಲ್ಲ ಎಂದೂ ಖಾತರಿಪಡಿಸಿಕೊಳ್ಳಬೇಕು. ಲಸಿಕೆ ಪಡೆದ ನಂತರವೂ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.</p>.<p>ವಿಶ್ವ ನದಿ ದಿನ ಸಂದರ್ಭವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ನದಿಗಳನ್ನು ಮಾಲಿನ್ಯದಿಂದ ಮುಕ್ತವಾಗಿ ಇರುವಂತೆ ನೋಡಿಕೊಳ್ಳಲು ಸಂಘಟಿತವಾದ ಪ್ರಯತ್ನಗಳು ನಡೆಯಬೇಕು ಎಂದು ಕರೆ ನೀಡಿದರು.</p>.<p>ಅಲ್ಲದೆ, ಮಹಾತ್ಮಗಾಂಧಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಖಾದಿ ಉತ್ಪನ್ನಗಳ ದಾಖಲೆ ವಹಿವಾಟು ನಡೆಯುವಂತೆಯೂ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.</p>.<p>ಇದನ್ನೂ ಓದಿ...<a href="https://www.prajavani.net/india-news/pm-narendra-modi-address-81st-edition-of-mann-ki-baat-on-world-rivers-day-speaks-river-cleaning-and-870083.html" target="_blank">ಆರೋಗ್ಯದತ್ತ ಗಮನಹರಿಸಲು ಪಾಠ ಕಲಿಸಿದ ಕೋವಿಡ್: ‘ಮನ್ ಕೀ ಬಾತ್’ನಲ್ಲಿ ಮೋದಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>