ಬಿಕೆಯು ವಕ್ತಾರ ರಾಕೇಶ್ ಟಿಕಾಯತ್ ಅವರು ಗುರುವಾರ ಗಾಜಿಪುರ ಪ್ರತಿಭಟನಾ ಸ್ಥಳದಲ್ಲಿ ಕಣ್ಣೀರು ಹಾಕಿದ್ದರು. ಎರಡು ತಿಂಗಳಿಂದ ಗಾಜಿಪುರದಲ್ಲಿ ಪ್ರತಿ ಭಟನೆ ನಡೆಸುತ್ತಿರುವ ರೈತರನ್ನು ಪೊಲೀಸರು ಬಲವಂತವಾಗಿ ತೆರವು ಮಾಡಲು ಮುಂದಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಹಾಗಾಗಿ, ಮುಜಫ್ಫರ್ ನಗರದಲ್ಲಿ ನಡೆದ ಮಹಾಪಂಚಾಯಿತಿಗೆ ಉತ್ತರ ಪ್ರದೇಶದ ಪೂರ್ವ ಭಾಗದಿಂದ ಸಾವಿರಾರು ಜನರು ಬಂದಿದ್ದಾರೆ.