ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ, ಗಣೇಶ ಮೂರ್ತಿ, ನಿರ್ಮಾಣವಾಗುತ್ತಿರುವ ರಾಮಮಂದಿರ ಮತ್ತು ನವೀಕೃತ ಕಾಶಿ ವಿಶ್ವನಾಥ ದೇವಸ್ಥಾನದ ಪ್ರತಿಕೃತಿಗಳು ಈಗ ಹರಾಜು ಹಾಕಲಾಗುವ ಪರಿಕರಗಳಲ್ಲಿ ಸೇರಿವೆ. ಹರಾಜಿನಲ್ಲಿ ಸಂಗ್ರಹವಾಗುವ ಮೊತ್ತವನ್ನು ‘ನಮಾಮಿ ಗಂಗೆ ಮಿಷನ್’ ಕಾರ್ಯಕ್ರಮಕ್ಕೆ ಬಳಸಲಾಗುವುದು ಎಂದು ಅವರು ತಿಳಿಸಿದರು.