ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಮಾಧ್ಯಮ ವೃತ್ತಿಯಲ್ಲಿರುವ ಎಲ್ಲರಿಗೂ ರಾಷ್ಟ್ರೀಯ ಪತ್ರಿಕಾ ದಿನದ ಶುಭಾಶಯಗಳು. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮತ್ತು ನಾಗರಿಕರಿಗೆ ಮಾಹಿತಿ ನೀಡುವ, ಸಬಲರನ್ನಾಗಿಸುವಲ್ಲಿ ಮಾಧ್ಯಮಗಳ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಜನರಿಗೆ ನಿರಂತರವಾಗಿ ಮಾಹಿತಿ ಒದಗಿಸಿದ್ದಕ್ಕಾಗಿ ಪತ್ರಕರ್ತರಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ’ ಎಂದು ತಿಳಿಸಿದ್ದಾರೆ.