ಸಾರ್ವತ್ರಿಕವಾಗಿ ಉಚಿತ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪತ್ರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಲಾಗಿದ್ದು, ಲಸಿಕೆ ನೀಡಿಕೆಯೊಂದೇ ಕೊರೊನಾ ಸೋಲಿಸಲು ಇರುವ ದಾರಿ ಎಂದು ಉಲ್ಲೇಖಿಸಲಾಗಿದೆ.