ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ‌ಧನ ಯೋಜನೆಯಿಂದ ಅನೇಕ ಕುಟುಂಬಗಳಿಗೆ ಆರ್ಥಿಕ ಭದ್ರತೆ: ನರೇಂದ್ರ ಮೋದಿ

ಜನಧನ್‌ ಯೋಜನೆಗೆ ಆರು ವರ್ಷ – ಪ್ರಧಾನಿ ನರೇಂದ್ರ ಮೋದಿ
Last Updated 28 ಆಗಸ್ಟ್ 2020, 8:15 IST
ಅಕ್ಷರ ಗಾತ್ರ

ನವದೆಹಲಿ: 'ಪ್ರಧಾನಮಂತ್ರಿ ಜನಧನ’ ಯೋಜನೆ ಬಡತನ ನಿರ್ಮೂಲನೆಯಂತಹ ಹಲವು ಯೋಜನೆಗಳಿಗೆ ತಳಹದಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

’ಪ್ರಧಾನ ಮಂತ್ರಿ ಜನಧನ’ ಯೋಜನೆಗೆ ಆರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಈ ಯೋಜನೆಯಿಂದಾಗಿ ಬ್ಯಾಂಕ್‌ ಖಾತೆಗಳಿಂದ ದೂರ ಉಳಿದಿದ್ದ ಕೋಟ್ಯಂತರ ಜನರು ಬ್ಯಾಂಕ್‌ ಖಾತೆಯನ್ನು ಹೊಂದಲು ಸಾಧ್ಯವಾಗಿದೆ. ಈ ಯೋಜನೆ ಗ್ರಾಮೀಣ ಭಾಗದ ಅನೇಕ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸಿದೆ. ಈ ಯೋಜನೆಯಿಂದ ಸರ್ಕಾರದ ಅನೇಕ ಜನ ಕಲ್ಯಾಣ ಯೋಜನೆಗಳನ್ನು ನೇರವಾಗಿ ಜನರ ಬಳಿಗೆ ಕೊಂಡೊಯ್ಯಲು ಸಾಧ್ಯವಾಗಿದೆ’ ಎಂದು ಹೇಳಿದ್ದಾರೆ.

ಅಂಕಿ ಅಂಶಗಳ ಗ್ರಾಫಿಕ್ಸ್‌ನೊಂದಿಗೆ ಯೋಜನೆಯ ಬೆಳವಣಿಗೆಯನ್ನು ಹಂಚಿಕೊಂಡಿರುವ ಪ್ರಧಾನಿಯವರು, ’ಇಲ್ಲಿಯವರೆಗೂ ಜನಧನ್ ಯೋಜನೆಯಡಿ 40 ಕೋಟಿಗೂ ಹೆಚ್ಚು ಮಂದಿ ಬ್ಯಾಂಕ್ ಖಾತೆ ತೆರೆದಿದ್ದಾರೆ. ಇದರಲ್ಲಿ ಶೇ 63ರಷ್ಟು ಫಲಾನುಭವಿಗಳು ಗ್ರಾಮೀಣ ಪ್ರದೇಶದವರಾಗಿದ್ದರೆ, ಶೇ 55ರಷ್ಟು ಮಹಿಳೆಯರಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT