ವಿಮಾನ ನಿಲ್ದಾಣದ ಭೂಮಿ ಪೂಜೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ‘21 ನೇ ಶತಮಾನದ ನವ ಭಾರತವು ಇಂದು ಅತ್ಯುತ್ತಮ ಆಧುನಿಕ ಮೂಲ ಸೌಕರ್ಯಗಳನ್ನು ಹೊಂದುತ್ತಿದೆ. ಉತ್ತಮ ರಸ್ತೆ, ಉತ್ತಮ ರೈಲು, ಉತ್ತಮ ವಿಮಾನ ನಿಲ್ದಾಣಗಳು ಕೇವಲ ಮೂಲ ಸೌಕರ್ಯ ಯೋಜನೆಗಳಷ್ಟೇ ಅಲ್ಲ. ಅವುಗಳು ಇಡೀ ಪ್ರದೇಶವನ್ನು ಬದಲಿಸುತ್ತವೆ. ಆ ಪ್ರದೇಶದ ಜನರ ಜೀವನವನ್ನು ಸಂಪೂರ್ಣವಾಗಿ ಪರಿವರ್ತಿಸುತ್ತವೆ’ಎಂದು ತಿಳಿಸಿದರು.