<p><strong>ನವದೆಹಲಿ</strong>: ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವೆ ಪ್ರಾದೇಶಿಕ ಆಂಬುಲೆನ್ಸ್ ಆರಂಭಿಸುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದ್ದಾರೆ.</p>.<p>‘ಕೋವಿಡ್–19 ನಿರ್ವಹಣೆ: ಅನುಭವ, ಉತ್ತಮ ಪದ್ಧತಿಗಳು ಮತ್ತು ಮುಂದಿನ ದಿಕ್ಸೂಚಿ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ನೆರೆಯ ಹತ್ತು ರಾಷ್ಟ್ರಗಳ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>‘ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಈ ಆಂಬುಲೆನ್ಸ್ ಸೇವೆಗಳನ್ನು ಬಳಸಿಕೊಳ್ಳಬಹುದು. ನಾಗರಿಕ ವಿಮಾನಯಾನ ಸಚಿವರು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು‘ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.</p>.<p>‘ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ವೈದ್ಯರು ಮತ್ತು ನರ್ಸ್ಗಳು ತಕ್ಷಣವೇ ಸಂಚರಿಸಲು ಅನುಕೂಲವಾಗುವಂತೆ ವಿಶೇಷ ವೀಸಾ ಯೋಜನೆ ಜಾರಿಗೊಳಿಸುವ ಅಗತ್ಯವಿದೆ’ ಎಂದು ಅವರುಹೇಳಿದ್ದಾರೆ.</p>.<p>‘21ನೇ ಶತಮಾನದಲ್ಲಿ ಏಷ್ಯಾ ಮುಂಚೂಣಿಯಲ್ಲಿರಬೇಕಾದರೆ ದಕ್ಷಿಣ ಏಷ್ಯಾ ರಾಷ್ಟ್ರಗಳು ಒಗ್ಗಟ್ಟಾಗಬೇಕು. ಕೋವಿಡ್–19 ಸಂದರ್ಭದಲ್ಲಿ ಪ್ರಾದೇಶಿಕ ಏಕತೆ ಸಾಧಿಸಬಹುದು ಎನ್ನುವುದನ್ನು ಈ ರಾಷ್ಟ್ರಗಳು ತೋರಿಸಿವೆ. ಹೀಗಾಗಿ, ಒಗ್ಗಟ್ಟು ಸಾಧ್ಯವಿದೆ’ ಎಂದು ವರ್ಚುವಲ್ ಭಾಷಣದಲ್ಲಿ ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವೆ ಪ್ರಾದೇಶಿಕ ಆಂಬುಲೆನ್ಸ್ ಆರಂಭಿಸುವ ಪ್ರಸ್ತಾವವನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದ್ದಾರೆ.</p>.<p>‘ಕೋವಿಡ್–19 ನಿರ್ವಹಣೆ: ಅನುಭವ, ಉತ್ತಮ ಪದ್ಧತಿಗಳು ಮತ್ತು ಮುಂದಿನ ದಿಕ್ಸೂಚಿ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ನೆರೆಯ ಹತ್ತು ರಾಷ್ಟ್ರಗಳ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>‘ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಈ ಆಂಬುಲೆನ್ಸ್ ಸೇವೆಗಳನ್ನು ಬಳಸಿಕೊಳ್ಳಬಹುದು. ನಾಗರಿಕ ವಿಮಾನಯಾನ ಸಚಿವರು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು‘ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.</p>.<p>‘ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ವೈದ್ಯರು ಮತ್ತು ನರ್ಸ್ಗಳು ತಕ್ಷಣವೇ ಸಂಚರಿಸಲು ಅನುಕೂಲವಾಗುವಂತೆ ವಿಶೇಷ ವೀಸಾ ಯೋಜನೆ ಜಾರಿಗೊಳಿಸುವ ಅಗತ್ಯವಿದೆ’ ಎಂದು ಅವರುಹೇಳಿದ್ದಾರೆ.</p>.<p>‘21ನೇ ಶತಮಾನದಲ್ಲಿ ಏಷ್ಯಾ ಮುಂಚೂಣಿಯಲ್ಲಿರಬೇಕಾದರೆ ದಕ್ಷಿಣ ಏಷ್ಯಾ ರಾಷ್ಟ್ರಗಳು ಒಗ್ಗಟ್ಟಾಗಬೇಕು. ಕೋವಿಡ್–19 ಸಂದರ್ಭದಲ್ಲಿ ಪ್ರಾದೇಶಿಕ ಏಕತೆ ಸಾಧಿಸಬಹುದು ಎನ್ನುವುದನ್ನು ಈ ರಾಷ್ಟ್ರಗಳು ತೋರಿಸಿವೆ. ಹೀಗಾಗಿ, ಒಗ್ಗಟ್ಟು ಸಾಧ್ಯವಿದೆ’ ಎಂದು ವರ್ಚುವಲ್ ಭಾಷಣದಲ್ಲಿ ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>