<p><strong>ನವದೆಹಲಿ</strong>: ಮಹಾತ್ಮ ಗಾಂಧೀಜಿಅವರ ಪುಣ್ಯ ತಿಥಿ ದಿನವಾದ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಅರ್ಪಿಸಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಅವರು, ‘ದೇಶದ ಪರವಾಗಿ ರಾಷ್ಟ್ರಪಿತ<br />ಮಹಾತ್ಮ ಗಾಂಧೀಜಿಅವರಿಗೆ ಗೌರವವನ್ನು ಅರ್ಪಿಸುತ್ತಿದ್ದೇನೆ.ಅವರು ಹುತಾತ್ಮರಾದ ದಿನವನ್ನು ಸ್ಮರಿಸುತ್ತಿದ್ದೇವೆ. ನಾವು ಅವರ ಶಾಂತಿ, ಅಹಿಂಸೆ, ಸರಳತೆ, ಪರಿಶುದ್ಧತೆ ಮತ್ತು ನಮ್ರತೆಯ ತತ್ವಗಳಿಗೆ ಬದ್ಧರಾಗಿರಬೇಕು’ ಎಂದಿದ್ದಾರೆ.</p>.<p>ಮಹಾತ್ಮ ಗಾಂಧೀಜಿಅವರ ಆದರ್ಶಗಳು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ. ಈ ಹುತಾತ್ಮರ ದಿನದಂದು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ ವೀರ ವನಿತೆಯರು ಹಾಗೂ ಯೋಧರನ್ನು ನೆನಪಿಸಿಕೊಳ್ಳೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<p>1948ರ ಜನವರಿ 30ರಂದುಗಾಂಧೀಜಿ ಅವರನ್ನು ನಾಥೂರಾಮ ಗೋಡ್ಸೆ ಗುಂಡಿಕ್ಕಿ ಕೊಂದಿದ್ದರು. ದೇಶದೆಲ್ಲೆಡೆ ಗಾಂಧಿಜೀ ಅವರ ಪುಣ್ಯ ತಿಥಿಯ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಾತ್ಮ ಗಾಂಧೀಜಿಅವರ ಪುಣ್ಯ ತಿಥಿ ದಿನವಾದ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಅರ್ಪಿಸಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಅವರು, ‘ದೇಶದ ಪರವಾಗಿ ರಾಷ್ಟ್ರಪಿತ<br />ಮಹಾತ್ಮ ಗಾಂಧೀಜಿಅವರಿಗೆ ಗೌರವವನ್ನು ಅರ್ಪಿಸುತ್ತಿದ್ದೇನೆ.ಅವರು ಹುತಾತ್ಮರಾದ ದಿನವನ್ನು ಸ್ಮರಿಸುತ್ತಿದ್ದೇವೆ. ನಾವು ಅವರ ಶಾಂತಿ, ಅಹಿಂಸೆ, ಸರಳತೆ, ಪರಿಶುದ್ಧತೆ ಮತ್ತು ನಮ್ರತೆಯ ತತ್ವಗಳಿಗೆ ಬದ್ಧರಾಗಿರಬೇಕು’ ಎಂದಿದ್ದಾರೆ.</p>.<p>ಮಹಾತ್ಮ ಗಾಂಧೀಜಿಅವರ ಆದರ್ಶಗಳು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ. ಈ ಹುತಾತ್ಮರ ದಿನದಂದು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ ವೀರ ವನಿತೆಯರು ಹಾಗೂ ಯೋಧರನ್ನು ನೆನಪಿಸಿಕೊಳ್ಳೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<p>1948ರ ಜನವರಿ 30ರಂದುಗಾಂಧೀಜಿ ಅವರನ್ನು ನಾಥೂರಾಮ ಗೋಡ್ಸೆ ಗುಂಡಿಕ್ಕಿ ಕೊಂದಿದ್ದರು. ದೇಶದೆಲ್ಲೆಡೆ ಗಾಂಧಿಜೀ ಅವರ ಪುಣ್ಯ ತಿಥಿಯ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>