ಮಸೂದೆಗಳ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ‘ಸ್ವಾತಂತ್ರ್ಯ ಬಂದಾಗಿನಿಂದ ರೈತರು ಮತ್ತು ಕಾರ್ಮಿಕರ ಪರವಾಗಿ ಪೊಳ್ಳು ಆಶ್ವಾಸನೆ, ಘೋಷಣೆಗಳನ್ನು ಮಾಡುತ್ತಾ, ಅವರ ಹೆಸರಿನಲ್ಲೇ ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ರಚಿಸಿದ್ದಾರೆ. ಈಗ ಅವರನ್ನೇ ತಮ್ಮ ಹೋರಾಟಕ್ಕೆ ದಾಳವನ್ನಾಗಿ ಮಾಡಿಕೊಂಡಿದ್ದಾರೆ’ ಎಂದು ದೂರಿದರು.