<p><strong>ನವದೆಹಲಿ</strong>: ಮುಂಗಾರು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ವಿವಿಧ ಪಕ್ಷಗಳ ಮುಖಂಡರು ಬುಧವಾರ ಮುಖಾಮುಖಿಯಾದರು.</p>.<p>ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಅಕಾಲಿ ದಳ, ವೈಎಸ್ಆರ್ ಕಾಂಗ್ರೆಸ್, ಬಿಜೆಡಿ, ಶಿವಸೇನಾ ನಾಯಕರು ಸಭೆಯಲ್ಲಿ ಪಾಲ್ಗೊಂಡರು.</p>.<p>ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಓಂ ಬಿರ್ಲಾ,' ಪ್ರಜಾತಂತ್ರದಲ್ಲಿ ಚರ್ಚೆಗಳನ್ನು ಪ್ರೋತ್ಸಾಹಿಸಬೇಕಿದೆ. ಇದು ಜನರ ಸೇವೆಗೆ ಇರುವ ಏಕೈಕ ಮಾರ್ಗವಾಗಿದೆ' ಎಂದು ಒತ್ತಿ ಹೇಳಿದರು.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/spent-sleepless-night-after-sacrilege-in-temple-of-democracy-naidu-after-oppn-protest-in-rs-856788.html" target="_blank"><strong>ನಿ</strong></a><a href="https://www.prajavani.net/india-news/spent-sleepless-night-after-sacrilege-in-temple-of-democracy-naidu-after-oppn-protest-in-rs-856788.html" target="_blank"><strong>ದ್ರೆಯಿಲ್ಲದ ರಾತ್ರಿ ಕಳೆದೆ: ಸಭಾಪತಿ ಎಂ.ವೆಂಕಯ್ಯನಾಯ್ಡು</strong></a></p>.<p>ಜುಲೈ 19 ರಂದು ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ, ಕೃಷಿ ಕಾಯ್ದೆಗಳು ಮತ್ತು ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದವು. ಇದರಿಂದಾಗಿ, ಕಲಾಪವನ್ನು ಪದೇ ಪದೇ ಮುಂದೂಡಲಾಗುತ್ತಿತ್ತು.</p>.<p>ಇಡೀ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನೂ ಪ್ರತಿಭಟನೆಗಳು ನುಂಗಿ ಹಾಕಿದವು. ವಿರೋಧ ಪಕ್ಷಗಳ ಗದ್ದಲದ ನಡುವೆಯೂ ರಾಜ್ಯಗಳಿಗೆ ತಮ್ಮದೇ ಪ್ರತ್ಯೇಕ ಇತರೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ಮಸೂದೆಗಳನ್ನು ಅಂಗೀಕರಿಸಲಾಯಿತು.</p>.<p><strong>ಇದನ್ನೂ ಓದಿ-<a href="https://www.prajavani.net/india-news/speaker-om-birla-says-it-pained-him-that-lok-sabha-did-not-run-smoothly-during-monsoon-session-856800.html" target="_blank">ಸುಗಮವಾಗಿ ನಡೆಯದ ಮುಂಗಾರು ಅಧಿವೇಶನ: ಸ್ಪೀಕರ್ ಓಂ ಬಿರ್ಲಾ ಬೇಸರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಗಾರು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ವಿವಿಧ ಪಕ್ಷಗಳ ಮುಖಂಡರು ಬುಧವಾರ ಮುಖಾಮುಖಿಯಾದರು.</p>.<p>ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಅಕಾಲಿ ದಳ, ವೈಎಸ್ಆರ್ ಕಾಂಗ್ರೆಸ್, ಬಿಜೆಡಿ, ಶಿವಸೇನಾ ನಾಯಕರು ಸಭೆಯಲ್ಲಿ ಪಾಲ್ಗೊಂಡರು.</p>.<p>ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಓಂ ಬಿರ್ಲಾ,' ಪ್ರಜಾತಂತ್ರದಲ್ಲಿ ಚರ್ಚೆಗಳನ್ನು ಪ್ರೋತ್ಸಾಹಿಸಬೇಕಿದೆ. ಇದು ಜನರ ಸೇವೆಗೆ ಇರುವ ಏಕೈಕ ಮಾರ್ಗವಾಗಿದೆ' ಎಂದು ಒತ್ತಿ ಹೇಳಿದರು.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/spent-sleepless-night-after-sacrilege-in-temple-of-democracy-naidu-after-oppn-protest-in-rs-856788.html" target="_blank"><strong>ನಿ</strong></a><a href="https://www.prajavani.net/india-news/spent-sleepless-night-after-sacrilege-in-temple-of-democracy-naidu-after-oppn-protest-in-rs-856788.html" target="_blank"><strong>ದ್ರೆಯಿಲ್ಲದ ರಾತ್ರಿ ಕಳೆದೆ: ಸಭಾಪತಿ ಎಂ.ವೆಂಕಯ್ಯನಾಯ್ಡು</strong></a></p>.<p>ಜುಲೈ 19 ರಂದು ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ, ಕೃಷಿ ಕಾಯ್ದೆಗಳು ಮತ್ತು ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದವು. ಇದರಿಂದಾಗಿ, ಕಲಾಪವನ್ನು ಪದೇ ಪದೇ ಮುಂದೂಡಲಾಗುತ್ತಿತ್ತು.</p>.<p>ಇಡೀ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನೂ ಪ್ರತಿಭಟನೆಗಳು ನುಂಗಿ ಹಾಕಿದವು. ವಿರೋಧ ಪಕ್ಷಗಳ ಗದ್ದಲದ ನಡುವೆಯೂ ರಾಜ್ಯಗಳಿಗೆ ತಮ್ಮದೇ ಪ್ರತ್ಯೇಕ ಇತರೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ಮಸೂದೆಗಳನ್ನು ಅಂಗೀಕರಿಸಲಾಯಿತು.</p>.<p><strong>ಇದನ್ನೂ ಓದಿ-<a href="https://www.prajavani.net/india-news/speaker-om-birla-says-it-pained-him-that-lok-sabha-did-not-run-smoothly-during-monsoon-session-856800.html" target="_blank">ಸುಗಮವಾಗಿ ನಡೆಯದ ಮುಂಗಾರು ಅಧಿವೇಶನ: ಸ್ಪೀಕರ್ ಓಂ ಬಿರ್ಲಾ ಬೇಸರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>