‘ಕಳೆದ ಏಳು ವರ್ಷದಿಂದ ಪ್ರಧಾನಿಯವರು ಒಂದೇ ರೀತಿಯ ಭಾಷಣವನ್ನು ನೀಡುತ್ತಾ ಬಂದಿದ್ದಾರೆ. ಆದರೆ ಈವರೆಗೆ ಸಣ್ಣ ರೈತರು, ನೊಂದ ವರ್ಗಗಳಿಗಾಗಿ ಏನೂ ಕೆಲಸವನ್ನು ಮಾಡಿಲ್ಲ. ಅವರು ಹೊಸ ಯೋಜನೆಗಳನ್ನು ಘೋಷಿಸುತ್ತಾರೆ. ಆದರೆ ಜಾರಿಗೆ ತರುವುದಿಲ್ಲ. ಬಹಳಷ್ಟು ವಿಷಯಗಳನ್ನು ಹೇಳುತ್ತಾರೆ. ಆದರೆ ಅದನ್ನು ಕಾರ್ಯಗತಗೊಳಿಸುವುದಿಲ್ಲ’ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.