<div class="J0lOec"><strong>ನವದೆಹಲಿ:</strong> ‘ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ.<em> </em>ಇಲ್ಲವಾದಲ್ಲಿ ಬದಲಾವಣೆ <span>ತಾನಾಗೇ ಆಗುತ್ತದೆ’ ಎಂದು ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗರಂ ಆಗಿದ್ದಾರೆ.</span><br /><br />ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸದರು ಎಲ್ಲಾ ಸಂಸತ್ ಅಧಿವೇಶನಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು. ಸದನದ ನಿಯಮಗಳನ್ನು<span>ಚಾಚೂ ತಪ್ಪದೆ </span> <span> ಪಾಲಿಸಬೇಕು’</span> ಎಂದು ಎಚ್ಚರಿಕೆ ನೀಡಿದ್ದಾರೆ.</div>.<p>ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸದನದಲ್ಲಿ ಹಾಜರಿರುವುದು ಕಡ್ಡಾಯ. ಈ ವಿಚಾರದಲ್ಲಿ ಸಣ್ಣ ಮಕ್ಕಳ ರೀತಿ ಪದೇ ಪದೇ ಹೇಳಿಸಿಕೊಳ್ಳುವುದು ಸರಿಯಲ್ಲ<span>’ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. </span></p>.<p>ತಮ್ಮ ಕ್ಷೇತ್ರಗಳಲ್ಲಿ ಮಕ್ಕಳಿಗಾಗಿ ಕ್ರೀಡೆ, ಫಿಟ್ನೆಸ್ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಂಸದರಿಗೆ ಮೋದಿ ಕರೆ ನೀಡಿದ್ದಾರೆ ಎಂದು <span>ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ</span> ಹೇಳಿದರು.</p>.<div class="J0lOec">ಆಯಾ ಪ್ರದೇಶಗಳಲ್ಲಿ ನೆಲೆಸಿರುವ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂಪರ್ಕದಲ್ಲಿರಬೇಕು. ಅವರೊಂದಿಗೆ ಆಗಾಗ್ಗೆ ಸಂವಾದ ನಡೆಸುವಂತೆ ಸಂಸದರಿಗೆ ಮೋದಿ ನಿರ್ದೇಶನ ನೀಡಿದ್ದಾರೆ ಎಂದು ಜೋಶಿ ಹೇಳಿದರು.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div class="J0lOec"><strong>ನವದೆಹಲಿ:</strong> ‘ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ.<em> </em>ಇಲ್ಲವಾದಲ್ಲಿ ಬದಲಾವಣೆ <span>ತಾನಾಗೇ ಆಗುತ್ತದೆ’ ಎಂದು ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗರಂ ಆಗಿದ್ದಾರೆ.</span><br /><br />ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸದರು ಎಲ್ಲಾ ಸಂಸತ್ ಅಧಿವೇಶನಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು. ಸದನದ ನಿಯಮಗಳನ್ನು<span>ಚಾಚೂ ತಪ್ಪದೆ </span> <span> ಪಾಲಿಸಬೇಕು’</span> ಎಂದು ಎಚ್ಚರಿಕೆ ನೀಡಿದ್ದಾರೆ.</div>.<p>ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸದನದಲ್ಲಿ ಹಾಜರಿರುವುದು ಕಡ್ಡಾಯ. ಈ ವಿಚಾರದಲ್ಲಿ ಸಣ್ಣ ಮಕ್ಕಳ ರೀತಿ ಪದೇ ಪದೇ ಹೇಳಿಸಿಕೊಳ್ಳುವುದು ಸರಿಯಲ್ಲ<span>’ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. </span></p>.<p>ತಮ್ಮ ಕ್ಷೇತ್ರಗಳಲ್ಲಿ ಮಕ್ಕಳಿಗಾಗಿ ಕ್ರೀಡೆ, ಫಿಟ್ನೆಸ್ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಂಸದರಿಗೆ ಮೋದಿ ಕರೆ ನೀಡಿದ್ದಾರೆ ಎಂದು <span>ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ</span> ಹೇಳಿದರು.</p>.<div class="J0lOec">ಆಯಾ ಪ್ರದೇಶಗಳಲ್ಲಿ ನೆಲೆಸಿರುವ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂಪರ್ಕದಲ್ಲಿರಬೇಕು. ಅವರೊಂದಿಗೆ ಆಗಾಗ್ಗೆ ಸಂವಾದ ನಡೆಸುವಂತೆ ಸಂಸದರಿಗೆ ಮೋದಿ ನಿರ್ದೇಶನ ನೀಡಿದ್ದಾರೆ ಎಂದು ಜೋಶಿ ಹೇಳಿದರು.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>