ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ: ಬಿಜೆಪಿ ಸಂಸದರ ವಿರುದ್ಧ ಮೋದಿ ಗರಂ

Last Updated 7 ಡಿಸೆಂಬರ್ 2021, 11:42 IST
ಅಕ್ಷರ ಗಾತ್ರ
ನವದೆಹಲಿ: ‘ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ. ಇಲ್ಲವಾದಲ್ಲಿ ಬದಲಾವಣೆ ತಾನಾಗೇ ಆಗುತ್ತದೆ’ ಎಂದು ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗರಂ ಆಗಿದ್ದಾರೆ.

ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸದರು ಎಲ್ಲಾ ಸಂಸತ್‌ ಅಧಿವೇಶನಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು. ಸದನದ ನಿಯಮಗಳನ್ನುಚಾಚೂ ತಪ್ಪದೆ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

ಅಧಿವೇಶನ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸದನದಲ್ಲಿ ಹಾಜರಿರುವುದು ಕಡ್ಡಾಯ. ಈ ವಿಚಾರದಲ್ಲಿ ಸಣ್ಣ ಮಕ್ಕಳ ರೀತಿ ಪದೇ ಪದೇ ಹೇಳಿಸಿಕೊಳ್ಳುವುದು ಸರಿಯಲ್ಲ’ ಎಂದು ಮೋದಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಕ್ಷೇತ್ರಗಳಲ್ಲಿ ಮಕ್ಕಳಿಗಾಗಿ ಕ್ರೀಡೆ, ಫಿಟ್‌ನೆಸ್‌ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಂಸದರಿಗೆ ಮೋದಿ ಕರೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಆಯಾ ಪ್ರದೇಶಗಳಲ್ಲಿ ನೆಲೆಸಿರುವ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂಪರ್ಕದಲ್ಲಿರಬೇಕು. ಅವರೊಂದಿಗೆ ಆಗಾಗ್ಗೆ ಸಂವಾದ ನಡೆಸುವಂತೆ ಸಂಸದರಿಗೆ ಮೋದಿ ನಿರ್ದೇಶನ ನೀಡಿದ್ದಾರೆ ಎಂದು ಜೋಶಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT