ನವದೆಹಲಿ: ‘ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳಿ. ಇಲ್ಲವಾದಲ್ಲಿ ಬದಲಾವಣೆ ತಾನಾಗೇ ಆಗುತ್ತದೆ’ ಎಂದು ಬಿಜೆಪಿ ಸಂಸದರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗರಂ ಆಗಿದ್ದಾರೆ.
ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸದರು ಎಲ್ಲಾ ಸಂಸತ್ ಅಧಿವೇಶನಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು. ಸದನದ ನಿಯಮಗಳನ್ನುಚಾಚೂ ತಪ್ಪದೆ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.