<p><strong>ನವದೆಹಲಿ</strong>: ಅಫ್ಗಾನಿಸ್ತಾನವು ತಾಲಿಬಾನ್ ನಿಯಂತ್ರಣದಲ್ಲಿರುವ ಕಾರಣ ಭಾರತ ಅಲ್ಲಿ ಈಗಾಗಲೇ ಮೂಲಸೌಕರ್ಯಕ್ಕೆ ಹೂಡಿರುವ ಬಂಡವಾಳವನ್ನು ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುವರು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.</p>.<p>ಭಾರತವು ಅಲ್ಲಿ ಕೈಗೊಂಡಿರುವ ಅನೇಕ ಮೂಲ ಸೌಕರ್ಯ ಯೋಜನೆಗಳು ಪೂರ್ಣಗೊಂಡಿವೆ. ಕೆಲವು ಮಾತ್ರ ಇನ್ನೂ ಪೂರ್ಣಗೊಳ್ಳಬೇಕಿವೆ. ಇವನ್ನು ಮುಂದುವರಿಸುವ ಬಗ್ಗೆ ಮೋದಿ ಅವರು ವಿದೇಶಾಂಗ ವ್ಯವಹಾರ ಸಚಿವ ಜತೆ ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<p>’ನಾವು ಅಲ್ಲಿ ಸಲ್ಮಾ ಅಣೆಕಟ್ಟೆ ನಿರ್ಮಿಸಿದ್ದೇವೆ. ಜಲ ಸಂಪನ್ಮೂಲ ಕ್ಷೇತ್ರದಲ್ಲಿ ನಾವು ಅಲ್ಲಿ ಕೆಲಸ ಮಾಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>’ಮೈತ್ರಿ ರಾಷ್ಟ್ರವಾಗಿ ನಾವು ಅಲ್ಲಿ ಕೆಲವು ರಸ್ತೆಗಳನ್ನು ನಿರ್ಮಿಸಲು ಕೂಡ ಅಫ್ಗಾನಿಸ್ತಾನದ ಸರ್ಕಾರದ ಜತೆ ಚರ್ಚಿಸಿದ್ದೆವು. ಆದರೆ ಆ ಕಾಮಗಾರಿಗಳನ್ನು ಆರಂಭಿಸದೇ ಇದ್ದದ್ದು ಒಳ್ಳೆಯದೇ ಆಯಿತು. ಪರಿಸ್ಥಿತಿ ಅಲ್ಲಿ ಈಗ ಕಳವಳವಾರಿಯಾಗಿದೆ’ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಫ್ಗಾನಿಸ್ತಾನವು ತಾಲಿಬಾನ್ ನಿಯಂತ್ರಣದಲ್ಲಿರುವ ಕಾರಣ ಭಾರತ ಅಲ್ಲಿ ಈಗಾಗಲೇ ಮೂಲಸೌಕರ್ಯಕ್ಕೆ ಹೂಡಿರುವ ಬಂಡವಾಳವನ್ನು ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುವರು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.</p>.<p>ಭಾರತವು ಅಲ್ಲಿ ಕೈಗೊಂಡಿರುವ ಅನೇಕ ಮೂಲ ಸೌಕರ್ಯ ಯೋಜನೆಗಳು ಪೂರ್ಣಗೊಂಡಿವೆ. ಕೆಲವು ಮಾತ್ರ ಇನ್ನೂ ಪೂರ್ಣಗೊಳ್ಳಬೇಕಿವೆ. ಇವನ್ನು ಮುಂದುವರಿಸುವ ಬಗ್ಗೆ ಮೋದಿ ಅವರು ವಿದೇಶಾಂಗ ವ್ಯವಹಾರ ಸಚಿವ ಜತೆ ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<p>’ನಾವು ಅಲ್ಲಿ ಸಲ್ಮಾ ಅಣೆಕಟ್ಟೆ ನಿರ್ಮಿಸಿದ್ದೇವೆ. ಜಲ ಸಂಪನ್ಮೂಲ ಕ್ಷೇತ್ರದಲ್ಲಿ ನಾವು ಅಲ್ಲಿ ಕೆಲಸ ಮಾಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>’ಮೈತ್ರಿ ರಾಷ್ಟ್ರವಾಗಿ ನಾವು ಅಲ್ಲಿ ಕೆಲವು ರಸ್ತೆಗಳನ್ನು ನಿರ್ಮಿಸಲು ಕೂಡ ಅಫ್ಗಾನಿಸ್ತಾನದ ಸರ್ಕಾರದ ಜತೆ ಚರ್ಚಿಸಿದ್ದೆವು. ಆದರೆ ಆ ಕಾಮಗಾರಿಗಳನ್ನು ಆರಂಭಿಸದೇ ಇದ್ದದ್ದು ಒಳ್ಳೆಯದೇ ಆಯಿತು. ಪರಿಸ್ಥಿತಿ ಅಲ್ಲಿ ಈಗ ಕಳವಳವಾರಿಯಾಗಿದೆ’ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>