ಲಡಾಖ್ ಭೇಟಿಯ ವೇಳೆ ಕೆಲವು ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಿದ ಅವರು, ಗರಿಷ್ಠ ಎಚ್ಚರಿಕೆಯಿಂದ ಇರುವಂತೆ ಯೋಧರಿಗೆ ಸೂಚನೆ ನೀಡಿದ್ದಾರೆ. ‘ನಮ್ಮ ಯೋಧರು ಹೆಚ್ಚಿನ ಆತ್ಮಸ್ಥೈರ್ಯ ಹೊಂದಿದ್ದು, ಆರೋಗ್ಯದಿಂದಿದ್ದಾರೆ ಎಂಬುದು ಹೆಮ್ಮೆಯ ವಿಚಾರ. ನಮ್ಮ ದೇಶದ ರಕ್ಷಣೆಗೆ ಅವರು ಸಶಕ್ತರಾಗಿದ್ದಾರೆ’ ಎಂದು ನರವಣೆ ತಿಳಿಸಿದರು.