<p class="title"><strong>ಜೈಸಲ್ಮೇರ್:</strong> ‘ಒಂದು ತಿಂಗಳಿನಿಂದ ಐಷಾರಾಮಿ ಹೋಟೆಲ್ನಲ್ಲಿ ತಂಗಿರುವ ಶಾಸಕರ ಅಸಮಾಧಾನ ಸಹಜ. ಆದರೆ, ಪ್ರಜಾಪ್ರಭುತ್ವವನ್ನು ಉಳಿಸಲು ಶಾಸಕರು ಇದನ್ನು ಸಹಿಸಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.</p>.<p class="title">ಜೋಧಪುರದಿಂದ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ಅಸಮಾಧಾನ ಮರೆತು, ಕ್ಷಮಿಸಿ ಮುಂದುವರಿಯಬೇಕು.ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವವನ್ನು ಉಳಿಸಲು ನಮ್ಮ ಶಾಸಕರು ನೀಡುತ್ತಿರುವ ಬೆಂಬಲವಿದು’ ಎಂದು ಹೇಳಿದರು. </p>.<p class="title">‘ನೂರಕ್ಕೂ ಹೆಚ್ಚು ಶಾಸಕರು ಇಷ್ಟು ದೀರ್ಘಕಾಲ ಒಟ್ಟಿಗೆ ಇರುವುದು ದೊಡ್ಡ ಸಂಗತಿ. ದೇಶದ ಇತಿಹಾಸದಲ್ಲಿ ಈ ರೀತಿಯ ಘಟನೆ ನಡೆದಿಲ್ಲ. ಒಟ್ಟಿಗೆ ಇರುವುದರಿಂದ ಅವರ ನಡುವಿನ ಬಾಂಧವ್ಯವೂ ವೃದ್ಧಿಯಾಗಿದೆ’ ಎಂದರು.</p>.<p>‘ಪ್ರಜಾಪ್ರಭುತ್ವವನ್ನು ಉಳಿಸುವ ನಮ್ಮ ಹೋರಾಟವು ಮುಂದುವರಿಯುತ್ತದೆ ಏಕೆಂದರೆ ಜನಾದೇಶ ನಮಗೆ ಸಿಕ್ಕಿದೆ. ಜನರ ನಂಬಿಕೆಯನ್ನು ಉಳಿಸಿಕೊಂಡು, ಉತ್ತಮ ಆಡಳಿತವನ್ನು ನೀಡುವುದು ಮತ್ತು ಕೊರೊನಾ ಸೋಂಕಿನ ವಿರುದ್ಧ ಒಟ್ಟಾಗಿ ಹೋರಾಡುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಗೆಲುವು ರಾಜ್ಯದ ಜನರಿಗೆ ಸಲ್ಲುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೈಸಲ್ಮೇರ್:</strong> ‘ಒಂದು ತಿಂಗಳಿನಿಂದ ಐಷಾರಾಮಿ ಹೋಟೆಲ್ನಲ್ಲಿ ತಂಗಿರುವ ಶಾಸಕರ ಅಸಮಾಧಾನ ಸಹಜ. ಆದರೆ, ಪ್ರಜಾಪ್ರಭುತ್ವವನ್ನು ಉಳಿಸಲು ಶಾಸಕರು ಇದನ್ನು ಸಹಿಸಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.</p>.<p class="title">ಜೋಧಪುರದಿಂದ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ಅಸಮಾಧಾನ ಮರೆತು, ಕ್ಷಮಿಸಿ ಮುಂದುವರಿಯಬೇಕು.ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವವನ್ನು ಉಳಿಸಲು ನಮ್ಮ ಶಾಸಕರು ನೀಡುತ್ತಿರುವ ಬೆಂಬಲವಿದು’ ಎಂದು ಹೇಳಿದರು. </p>.<p class="title">‘ನೂರಕ್ಕೂ ಹೆಚ್ಚು ಶಾಸಕರು ಇಷ್ಟು ದೀರ್ಘಕಾಲ ಒಟ್ಟಿಗೆ ಇರುವುದು ದೊಡ್ಡ ಸಂಗತಿ. ದೇಶದ ಇತಿಹಾಸದಲ್ಲಿ ಈ ರೀತಿಯ ಘಟನೆ ನಡೆದಿಲ್ಲ. ಒಟ್ಟಿಗೆ ಇರುವುದರಿಂದ ಅವರ ನಡುವಿನ ಬಾಂಧವ್ಯವೂ ವೃದ್ಧಿಯಾಗಿದೆ’ ಎಂದರು.</p>.<p>‘ಪ್ರಜಾಪ್ರಭುತ್ವವನ್ನು ಉಳಿಸುವ ನಮ್ಮ ಹೋರಾಟವು ಮುಂದುವರಿಯುತ್ತದೆ ಏಕೆಂದರೆ ಜನಾದೇಶ ನಮಗೆ ಸಿಕ್ಕಿದೆ. ಜನರ ನಂಬಿಕೆಯನ್ನು ಉಳಿಸಿಕೊಂಡು, ಉತ್ತಮ ಆಡಳಿತವನ್ನು ನೀಡುವುದು ಮತ್ತು ಕೊರೊನಾ ಸೋಂಕಿನ ವಿರುದ್ಧ ಒಟ್ಟಾಗಿ ಹೋರಾಡುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಗೆಲುವು ರಾಜ್ಯದ ಜನರಿಗೆ ಸಲ್ಲುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>