<p><strong>ತಿರುಪತಿ: </strong>ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ನವರಾತ್ರಿ ಬ್ರಹ್ಮೋತ್ಸವವು ಅ. 16ರಿಂದ ಆರಂಭವಾಗಲಿದ್ದು, ಈ ಬಾರಿ ಭಕ್ತರು ಮತ್ತು ಮೆರವಣಿಗೆ ಇಲ್ಲದೆಯೇ ಬ್ರಹ್ಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಟಿಟಿಡಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಜವಾಹರ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಕೋವಿಡ್–19 ಕಾರಣಕ್ಕಾಗಿ ಮೆರವಣಿಗೆ ಮತ್ತು ಭಕ್ತರ ಭಾಗವಹಿಸುವಿಕೆ ಇಲ್ಲದೆಯೇ ಒಂಬತ್ತು ದಿನಗಳ ಕಾಲ ಬ್ರಹ್ಮೋತ್ಸವವನ್ನು ನಡೆಸಲು ನಿರ್ಧಾರ ಕೈಗೊಳ್ಳಲಾಯಿತು’ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.</p>.<p class="bodytext">‘ಬೆಟ್ಟದೊಳಗಿರುವ ದೇವಸ್ಥಾನದಲ್ಲಿ ಹಿರಿಯ ಅರ್ಚಕರು ಮತ್ತು ಉನ್ನತಮಟ್ಟದ ಅಧಿಕಾರಿಗಳು ಮಾತ್ರ ಬ್ರಹ್ಮೋತ್ಸವದ ವಿಧಿ–ವಿಧಾನಗಳನ್ನು ನೆರೆವೇರಿಸುವರು. ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಾರೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ: </strong>ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ನವರಾತ್ರಿ ಬ್ರಹ್ಮೋತ್ಸವವು ಅ. 16ರಿಂದ ಆರಂಭವಾಗಲಿದ್ದು, ಈ ಬಾರಿ ಭಕ್ತರು ಮತ್ತು ಮೆರವಣಿಗೆ ಇಲ್ಲದೆಯೇ ಬ್ರಹ್ಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಟಿಟಿಡಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಜವಾಹರ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಕೋವಿಡ್–19 ಕಾರಣಕ್ಕಾಗಿ ಮೆರವಣಿಗೆ ಮತ್ತು ಭಕ್ತರ ಭಾಗವಹಿಸುವಿಕೆ ಇಲ್ಲದೆಯೇ ಒಂಬತ್ತು ದಿನಗಳ ಕಾಲ ಬ್ರಹ್ಮೋತ್ಸವವನ್ನು ನಡೆಸಲು ನಿರ್ಧಾರ ಕೈಗೊಳ್ಳಲಾಯಿತು’ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.</p>.<p class="bodytext">‘ಬೆಟ್ಟದೊಳಗಿರುವ ದೇವಸ್ಥಾನದಲ್ಲಿ ಹಿರಿಯ ಅರ್ಚಕರು ಮತ್ತು ಉನ್ನತಮಟ್ಟದ ಅಧಿಕಾರಿಗಳು ಮಾತ್ರ ಬ್ರಹ್ಮೋತ್ಸವದ ವಿಧಿ–ವಿಧಾನಗಳನ್ನು ನೆರೆವೇರಿಸುವರು. ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಾರೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>