<p><strong>ನವದೆಹಲಿ:</strong> ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯಾದ ಬೆನ್ನಲ್ಲೇ ಅದೇ ರೀತಿಯಲ್ಲಿ ಕೊಲೆ ಮಾಡುವುದಾಗಿ ಬಿಜೆಪಿಯ ದೆಹಲಿ ಘಟಕದ ಮಾಧ್ಯಮ ವಿಭಾಗದ ಮಾಜಿ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ಗೂ ಬೆದರಿಕೆಯೊಡ್ಡಲಾಗಿದೆ.</p>.<p>ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಉದಯಪುರದ ಹತ್ಯೆ ವಿಡಿಯೊದ ಜತೆ ಕೊಲೆ ಬೆದರಿಕೆಯುಳ್ಳ ಸಂದೇಶ ಬಂದಿದ್ದು, ತಮಗೆ ಹಾಗೂ ಕುಟುಂಬದವರಿಗೆ ಭದ್ರತೆ ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>.<p><a href="https://www.prajavani.net/india-news/rajasthan-udaipur-horror-murderers-encounter-son-of-kanhaiya-lal-949874.html" itemprop="url">ಉದಯಪುರ: ತಂದೆಯ ಹತ್ಯೆ ಆರೋಪಿಗಳನ್ನು ಎನ್ಕೌಂಟರ್ ಮಾಡಿ– ಟೈಲರ್ ಪುತ್ರನ ಆಗ್ರಹ </a></p>.<p>ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹಾಗೂ ಜಿಂದಾಲ್ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರ ದೇಶ, ವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.</p>.<p>‘ಬೆಳಿಗ್ಗೆ 6.45ರ ವೇಳೆಗೆ ಉದಯಪುರದ ಕನ್ಹಯ್ಯ ಲಾಲ್ ಹತ್ಯೆ ವಿಡಿಯೊದ ಜತೆಗೆ ಮೂರು ಇ–ಮೇಲ್ ಸಂದೇಶಗಳು ಬಂದಿವೆ. ಅದೇ ರೀತಿ ನನ್ನ ಹಾಗೂ ಕುಟುಂಬದವರನ್ನು ಹತ್ಯೆ ಮಾಡುವ ಬಗ್ಗೆ ಬೆದರಿಕೆಯೊಡ್ಡಲಾಗಿದೆ’ ಎಂದು ಜಿಂದಾಲ್ ಹೇಳಿದ್ದಾರೆ.</p>.<p><a href="https://www.prajavani.net/india-news/udaipur-horror-incident-has-shaken-me-from-inside-harbhajan-singh-949869.html" itemprop="url">ಉದಯಪುರದ ಟೈಲರ್ ಹತ್ಯೆ ಪ್ರಕರಣ ನನ್ನನ್ನು ಬೆಚ್ಚಿಬೀಳಿಸಿದೆ: ಹರಭಜನ್ ಸಿಂಗ್ </a></p>.<p>‘ಇದು ಮೊದಲ ಬೆದರಿಕೆಯಲ್ಲ. ನೂರಾರು ಬೆದರಿಕೆ ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿವೆ. ದೂರವಾಣಿ ಕರೆಗಳು ಹಾಗೂ ಎಸ್ಎಂಎಸ್ಗಳೂ ಬಂದಿವೆ. ಆದರೆ ದೆಹಲಿ ಪೊಲೀಸರು ನನ್ನ ಭದ್ರತೆ ಹೆಚ್ಚಿಸಿಲ್ಲ. ಹತ್ತಾರು ಬಾರಿ ಪೊಲೀಸ್ ಅಧಿಕಾರಿಗಳಿಗೆ, ಆಯುಕ್ತರಿಗೆ ಪತ್ರ ಬರೆದಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯಾದ ಬೆನ್ನಲ್ಲೇ ಅದೇ ರೀತಿಯಲ್ಲಿ ಕೊಲೆ ಮಾಡುವುದಾಗಿ ಬಿಜೆಪಿಯ ದೆಹಲಿ ಘಟಕದ ಮಾಧ್ಯಮ ವಿಭಾಗದ ಮಾಜಿ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ಗೂ ಬೆದರಿಕೆಯೊಡ್ಡಲಾಗಿದೆ.</p>.<p>ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಉದಯಪುರದ ಹತ್ಯೆ ವಿಡಿಯೊದ ಜತೆ ಕೊಲೆ ಬೆದರಿಕೆಯುಳ್ಳ ಸಂದೇಶ ಬಂದಿದ್ದು, ತಮಗೆ ಹಾಗೂ ಕುಟುಂಬದವರಿಗೆ ಭದ್ರತೆ ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>.<p><a href="https://www.prajavani.net/india-news/rajasthan-udaipur-horror-murderers-encounter-son-of-kanhaiya-lal-949874.html" itemprop="url">ಉದಯಪುರ: ತಂದೆಯ ಹತ್ಯೆ ಆರೋಪಿಗಳನ್ನು ಎನ್ಕೌಂಟರ್ ಮಾಡಿ– ಟೈಲರ್ ಪುತ್ರನ ಆಗ್ರಹ </a></p>.<p>ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹಾಗೂ ಜಿಂದಾಲ್ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರ ದೇಶ, ವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.</p>.<p>‘ಬೆಳಿಗ್ಗೆ 6.45ರ ವೇಳೆಗೆ ಉದಯಪುರದ ಕನ್ಹಯ್ಯ ಲಾಲ್ ಹತ್ಯೆ ವಿಡಿಯೊದ ಜತೆಗೆ ಮೂರು ಇ–ಮೇಲ್ ಸಂದೇಶಗಳು ಬಂದಿವೆ. ಅದೇ ರೀತಿ ನನ್ನ ಹಾಗೂ ಕುಟುಂಬದವರನ್ನು ಹತ್ಯೆ ಮಾಡುವ ಬಗ್ಗೆ ಬೆದರಿಕೆಯೊಡ್ಡಲಾಗಿದೆ’ ಎಂದು ಜಿಂದಾಲ್ ಹೇಳಿದ್ದಾರೆ.</p>.<p><a href="https://www.prajavani.net/india-news/udaipur-horror-incident-has-shaken-me-from-inside-harbhajan-singh-949869.html" itemprop="url">ಉದಯಪುರದ ಟೈಲರ್ ಹತ್ಯೆ ಪ್ರಕರಣ ನನ್ನನ್ನು ಬೆಚ್ಚಿಬೀಳಿಸಿದೆ: ಹರಭಜನ್ ಸಿಂಗ್ </a></p>.<p>‘ಇದು ಮೊದಲ ಬೆದರಿಕೆಯಲ್ಲ. ನೂರಾರು ಬೆದರಿಕೆ ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿವೆ. ದೂರವಾಣಿ ಕರೆಗಳು ಹಾಗೂ ಎಸ್ಎಂಎಸ್ಗಳೂ ಬಂದಿವೆ. ಆದರೆ ದೆಹಲಿ ಪೊಲೀಸರು ನನ್ನ ಭದ್ರತೆ ಹೆಚ್ಚಿಸಿಲ್ಲ. ಹತ್ತಾರು ಬಾರಿ ಪೊಲೀಸ್ ಅಧಿಕಾರಿಗಳಿಗೆ, ಆಯುಕ್ತರಿಗೆ ಪತ್ರ ಬರೆದಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>