<p><strong>ಚಂಡೀಗಡ:</strong> ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರೂವಾರಿ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಆರೋಪಿಸಿದ್ದಾರೆ.</p>.<p>ಸಿಂಗ್ ಅವರು ತಮ್ಮದೇ ರಾಜಕೀಯ ಪಕ್ಷ ಕಟ್ಟುವುದಾಗಿ ಘೋಷಿಸಿದ ಎರಡು ದಿನಗಳ ಬಳಿಕ ಸಿಧು ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಿದ್ದರೆ ಅವರು ಬಿಜೆಪಿಯೊಂದಿಗೆ ಸ್ಥಾನ ಹಂಚಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.</p>.<p>ʼಕರಾಳ ಕಾಯ್ದೆಗಳ ರೂವಾರಿ. ಪಂಜಾಬ್ಕೃಷಿಗೆಅಂಬಾನಿಯನ್ನು ತಂದವರು, ಪಂಜಾಬ್ ರೈತರು, ಸಣ್ಣ ವ್ಯಾಪಾರಿಗಳು, ಕಾರ್ಮಿಕರನ್ನು ನಾಶ ಮಾಡಿದವರು ಮತ್ತು ಒಂದೆರಡು ದೊಡ್ಡ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಟ್ವವರುʼ ಎಂದು ಟ್ವೀಟ್ ಮಾಡಿ ಸಿಂಗ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.</p>.<p>ಸಿಂಗ್, ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಚರಣ್ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.</p>.<p>ಕಳೆದ ವರ್ಷ ನವೆಂಬರ್ 26ರಿಂದ ದೆಹಲಿ ಗಡಿಯಲ್ಲಿ ಬೀಡುಬಿಟ್ಟಿರುವನೂರಾರು ರೈತರು,ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರೂವಾರಿ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಆರೋಪಿಸಿದ್ದಾರೆ.</p>.<p>ಸಿಂಗ್ ಅವರು ತಮ್ಮದೇ ರಾಜಕೀಯ ಪಕ್ಷ ಕಟ್ಟುವುದಾಗಿ ಘೋಷಿಸಿದ ಎರಡು ದಿನಗಳ ಬಳಿಕ ಸಿಧು ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಿದ್ದರೆ ಅವರು ಬಿಜೆಪಿಯೊಂದಿಗೆ ಸ್ಥಾನ ಹಂಚಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.</p>.<p>ʼಕರಾಳ ಕಾಯ್ದೆಗಳ ರೂವಾರಿ. ಪಂಜಾಬ್ಕೃಷಿಗೆಅಂಬಾನಿಯನ್ನು ತಂದವರು, ಪಂಜಾಬ್ ರೈತರು, ಸಣ್ಣ ವ್ಯಾಪಾರಿಗಳು, ಕಾರ್ಮಿಕರನ್ನು ನಾಶ ಮಾಡಿದವರು ಮತ್ತು ಒಂದೆರಡು ದೊಡ್ಡ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಟ್ವವರುʼ ಎಂದು ಟ್ವೀಟ್ ಮಾಡಿ ಸಿಂಗ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.</p>.<p>ಸಿಂಗ್, ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಚರಣ್ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.</p>.<p>ಕಳೆದ ವರ್ಷ ನವೆಂಬರ್ 26ರಿಂದ ದೆಹಲಿ ಗಡಿಯಲ್ಲಿ ಬೀಡುಬಿಟ್ಟಿರುವನೂರಾರು ರೈತರು,ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>