ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರಿಯಾಂಕಾ ಅವರನ್ನು ಬಂಧಿಸಿ 54 ಗಂಟೆಗಳು ಕಳೆದರೂ, ಇನ್ನೂ ಯಾವುದೇ ನ್ಯಾಯಾಲಯದ ಎದುರು ಹಾಜರುಪಡಿಸಿಲ್ಲ. ವ್ಯಕ್ತಿಯನ್ನು ಬಂಧಿಸಿದ 24 ಗಂಟೆಗೆಯೊಳಗೆ ನ್ಯಾಯಾಲಯಕ್ಕೆ ಹಾಜರಪಡಿಸದಿರುವುದು ಕಾನೂನುಬಾಹಿರವಾಗಿದ್ದು, ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಬಿಜೆಪಿ ಮತ್ತು ಉತ್ತರ ಪ್ರದೇಶ ಪೊಲೀಸರು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಮೂಲಭೂತ ಮಾನವ ಹಕ್ಕುಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ‘ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.